Advertisement

KGF: ಮದುವೆಯಾದ ಕೂಡಲೇ ಮಚ್ಚಿನಿಂದ ಹಲ್ಲೆ ಪ್ರಕರಣ: ಗಾಯಾಳು ವರನೂ ಸಾವು

12:48 AM Aug 09, 2024 | Team Udayavani |

ಕೋಲಾರ: ಬೆಳಗ್ಗೆ ಮದುವೆಯಾಗಿ ಸಂಜೆ ವೇಳೆಗೆ ಮಚ್ಚಿನಿಂದ ಹಲ್ಲೆ ಮಾಡಿಕೊಂಡಿದ್ದ ನವ ವಧು, ವರ ಪೈಕಿ ವಧು ಕೆಜಿಎಫ್‌ನ ಸರಕಾರಿ ಆಸ್ಪತ್ರೆಯಲ್ಲಿ ಬುಧವಾರ ಮೃತಪಟ್ಟಿದ್ದರೆ, ಗಂಭೀರ ಗಾಯಗೊಂಡಿದ್ದ ವರನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫ‌ಲಿಸದೇ ಗುರುವಾರ ಕೊನೆಯುಸಿರೆಳೆದಿದ್ದಾನೆ.

Advertisement

ಪರಸ್ಪರ ಪ್ರೀತಿಸಿದ್ದ ಲಿಖೀತಾಶ್ರೀ (18), ನವೀನ್‌ ಕುಮಾರ್‌ (30) ವಿವಾಹ ತಾಲೂಕಿನ ಚಂಬರಸನಹಳ್ಳಿಯಲ್ಲಿ ಬುಧವಾರ ಎರಡೂ ಕಡೆಯ ಹಿರಿಯರ ಸಮ್ಮುಖದಲ್ಲಿ ನಡೆದಿತ್ತು. ಬಳಿಕ ಕೋಣೆಯಲ್ಲಿ ಇಬ್ಬರೂ ಪರಸ್ಪರ ಹೊಡೆದಾಡಿಕೊಂಡಿದ್ದರು. ಮಾರಾಮಾರಿ ಏತಕ್ಕಾಗಿ ನಡೆಯಿತು ಎಂಬುದು ಇನ್ನೂ ನಿಗೂಢವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next