Advertisement

ಕಾಂಗ್ರೆಸ್ ಗೆ ಕೆ.ಎಚ್.ಮುನಿಯಪ್ಪ ಗುಡ್ ಬೈ?:ಸಿಎಂ ಭೇಟಿಯಾಗಿ ಚರ್ಚೆ

02:24 PM Aug 26, 2022 | Team Udayavani |

ಬೆಂಗಳೂರು : ವಿಪಕ್ಷ ನಾಯಕ‌ ಸಿದ್ದರಾಮಯ್ಯ , ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ‌‌ ಮುನಿಸಿಕೊಂಡಿರುವ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಕಾಂಗ್ರೆಸ್ ಗೆ ಗುಡ್ ಬೈ ಹೇಳುವುದು ಬಹುತೇಕ ಖಚಿತವಾಗಿದೆ.

Advertisement

ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಕಾಂಗ್ರೆಸ್  ತೊರೆದ ದಿನವೇ ಮುನಿಯಪ್ಪ, ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು ಈಗ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮನೆಗೆ ಮೊದಲು ಭೇಟಿ ನೀಡಿ ಮಾತುಕತೆ ನಡೆಸಿದ ಮುನಿಯಪ್ಪ ನಂತರ ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಲು ಮೂವರೂ ನಿರಾಕರಿಸಿದ್ದಾರೆ. ನಂತರ ಸುದ್ದಿಗಾರರ ಜತೆ ಮಾತನಾಡಿದ ಮುನಿಯಪ್ಪ, ”ನಾನು ರಾಜಕೀಯ ಚರ್ಚೆಗೆ ಹೋಗಿಲ್ಲ. ಆದಿ ಜಾಂಬವ ಸಂಘಟನೆಗೆ ಜಾಗ ನೀಡುವ ಬಗ್ಗೆ ಚರ್ಚೆಗೆ ಹೋಗಿದ್ದೆ” ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next