Advertisement

ಆಂಧ್ರ ಕಾಂಗ್ರೆಸ್‌ ಚುನಾವಣೆ ಉಸ್ತುವಾರಿ ಕೆ.ಎಚ್‌.ಮುನಿಯಪ್ಪಗೆ

12:21 PM May 06, 2017 | Harsha Rao |

ಕೋಲಾರ: ಆಂಧ್ರಪ್ರದೇಶ ಕಾಂಗ್ರೆಸ್‌ನ ಸಾಂಸ್ಥಿಕ ಚುನಾವಣೆಗೆ ಚುನಾವಣಾಧಿಕಾರಿಯಾಗಿ ಮಾಜಿ ಕೇಂದ್ರ ಸಚಿವ, ಸಂಸದ ಕೆ.ಎಚ್‌. ಮುನಿಯಪ್ಪ ಅವರನ್ನು ನೇಮಿಸಲಾಗಿದೆ. ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮುಲ್ಲಪಲ್ಲಿ ರಾಮಚಂದ್ರನ್‌ ಅವರು ಈ ಸಂಬಂಧ ಆದೇಶ ಹೊರಡಿಸಿದ್ದು, ಪಕ್ಷದ ಬಲವರ್ಧನೆಗೆ ಮುತುವರ್ಜಿ ವಹಿಸುವಂತೆ ಸೂಚಿಸಿದ್ದಾರೆ.

Advertisement

ಆಂಧ್ರಪ್ರದೇಶದಲ್ಲಿ ಪಕ್ಷದ ಸದಸ್ಯತ್ವ ನೋಂದಣಿ ಕುರಿತು ಉಸ್ತುವಾರಿ ವಹಿಸಬೇಕು. ತಕ್ಷಣವೇ ಅಲ್ಲಿ ಪಕ್ಷದ ಸಾಂಸ್ಥಿಕ
ಚುನಾವಣಾ ಪ್ರಕ್ರಿಯೆಗಳು ಆರಂಭಗೊಳ್ಳಲು ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದಾರೆ.

ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್‌ನ್ನು ಬೇರುಮಟ್ಟದಿಂದ ಬಲಗೊಳಿಸುವಲ್ಲಿ ಸದಸ್ಯತ್ವ ನೋಂದಣಿ ಅತಿ ಪ್ರಮುಖವಾಗಿದ್ದು, ಈ ನಿಟ್ಟಿನಲ್ಲಿ ಹೆಚ್ಚಿನ ನಿಗಾವಹಿಸಿ, ಸಾಂಸ್ಥಿಕ ಚುನಾವಣೆಗಳಲ್ಲಿ ಯಾವುದೇ ಲೋಪವಾಗದಂತೆ ಕ್ರಮ ವಹಿಸಿ ಎಂದು
ಸಲಹೆ ನೀಡಿದ್ದಾರೆ. ಈ ಮಧ್ಯೆ, ಕರ್ನಾಟಕ ಕಾಂಗ್ರೆಸ್‌ನ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಅವರು ದೆಹಲಿಯ ಕೆ.ಎಚ್‌.ಮುನಿಯಪ್ಪ ನಿವಾಸಕ್ಕೆ ಭೇಟಿ ನೀಡಿ, ಕರ್ನಾಟಕದಲ್ಲಿ ಪಕ್ಷದ ಬಲವರ್ಧನೆಗೆ ಸಲಹೆ ನೀಡುವಂತೆ ಕೋರಿದರು. ರಾಜ್ಯದಲ್ಲಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸಿ ಮುಂದಿನ ವಿಧಾನಸಭಾ ಚುನಾವಣೆಗೆ ಸಜ್ಜುಗೊಳಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಲಹೆ ನೀಡುವಂತೆ ಮನವಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next