Advertisement

ಲಾಕ್ ಡೌನ್ ಬಂದೋಬಸ್ತ್ ಗೆ ಬರುವಾಗ ನಾಯಿ ಜೀವ ಉಳಿಸಲು ಹೋಗಿ ಪ್ರಾಣ ಬಿಟ್ಟ ಪಿಎಸ್ ಐ

09:16 AM Apr 19, 2020 | keerthan |

ಬೆಳಗಾವಿ: ಲಾಕ್ ಡೌನ್ ಬಂದೋಬಸ್ತ್ ಗಾಗಿ ತಾಲೂಕಿನ ಯಳ್ಳೂರು ಗ್ರಾಮದಿಂದ ಬರುತ್ತಿದ್ದ ಖಡೇಬಜಾರ್ ಪೊಲೀಸ್ ಠಾಣೆ ಪಿಎಸ್ ಐ ಅವರು ಎದುರು ಬಂದ ನಾಯಿ ಜೀವ ಉಳಿಸಲು ಹೋಗಿ ಬೈಕ್ ಸ್ಕಿಡ್ ಆಗಿ ಪ್ರಾಣ ಬಿಟ್ಟಿದ್ದಾರೆ.

Advertisement

ಇಲ್ಲಿಯ ಖಡೇಬಜಾರ್ ಪೊಲೀಸ್ ಠಾಣೆಯ ಪಿಎಸ್ಐ ಮನೋಹರ ಗಣಾಚಾರಿ ಅವರು ಬೆಳಗಿನ ಜಾವ ಕರ್ತವ್ಯಕ್ಕೆ ಹಾಜರಾಗಲು ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಯಳ್ಳೂರು ಸಮೀಪದ ಕೆಎಲ್ ಇ ಆಸ್ಪತ್ರೆ ಬಳಿ ಶನಿವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಬೈಕ್ ನಲ್ಲಿ ಬರುತ್ತಿದ್ದಾಗ ನಾಯಿ ಅಡ್ಡ ಬಂದಿದೆ.‌ ಇದನ್ನು ಉಳಿಸಲು ಹೋಗಿ ಸ್ಕಿಡ್ ಆಗಿ ಬಿದ್ದಿದ್ದಾರೆ. ತಲೆಗೆ ಬಲವಾದ ಪೆಟ್ಟು ಬಿದ್ದು ರಕ್ರಸ್ರಾವವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.‌

ಮೃತಪಟ್ಟ ಮನೋಹರ ಗಣಾಚಾರಿ ಆರು ತಿಂಗಳ ಹಿಂದಷ್ಟೇ ಬಡ್ತಿ ಹೊಂದಿ ಪಿಎಸ್ಐ ಆಗಿದ್ದರು. ವರ್ಷದ ಹಿಂದಷ್ಟೇ ಯಳ್ಳೂರಿನಲ್ಲಿ ಮನೆ ಕಟ್ಟಿಸಿದ್ದರು. ಮುಂದಿನ ಸೆಪ್ಟೆಂಬರ್ ತಿಂಗಳಲ್ಲಿ ನಿವೃತ್ತಿಯಾಗುವವರಿದ್ದರು. ಅಷ್ಟರೊಳಗೆ ಈ ದುರಂತ ಸಂಭವಿಸಿದೆ.‌

ಖಡೆಬಜಾರ ಠಾಣಾ ವ್ಯಾಪ್ತಿಯ ರೇಣುಕಾ ಹೊಟೇಲ್ ಬಳಿ ಇವರು ಕರ್ತವ್ಯಕ್ಕೆ ಬರುತ್ತಿದ್ದರು. ಮೃತರು ಪತ್ನಿ, ಪುತ್ರ, ಮತ್ತು ತಂದೆ ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next