Advertisement
ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಥಳೀಯರಲ್ಲಿ ಗುಡಿ ಕೈಗಾರಿಕೆ ಸ್ಥಾಪಿಸುವ ಮೂಲಕ ನಿರುದ್ಯೋಗ ಸಮಸ್ಯೆ ನಿವಾರಿಸುವ ಸಲುವಾಗಿ ಈ ಖಾದಿ ಗ್ರಾಮೋದ್ಯೋಗ ವಸ್ತು ಪ್ರದರ್ಶನಆಯೋಜಿಸಲಾಗುತ್ತಿದೆ. ವಸ್ತು ಪ್ರದರ್ಶನದಲ್ಲಿ ಒಟ್ಟು 75 ಮಳಿಗೆಗಳನ್ನು ನಿರ್ಮಿಸಲಾಗುತ್ತಿದೆ.
Related Articles
Advertisement
ಗುಡಿ ಕೈಗಾರಿಕೆಗಳಲ್ಲಿ ರೆಡಿಮೇಡ್ ವಸ್ತ್ರಗಳು, ಲಿಡ್ಕರ್, ಅಗರ್ಬತ್ತಿ, ಅಪ್ಪಳ ತಯಾರಿಕೆ, ವ್ಯಾನಿಟಿ ಬ್ಯಾಗ್ ಸಿದ್ಧ ಪಡಿಸುವುದು ಇನ್ನಿತರೆ ಗುಡಿಕೈಗಾರಿಕೆಗಳ ವಸ್ತುಗಳನ್ನು ಪ್ರದರ್ಶಿಸಲಾಗುತ್ತದೆ. ಮೇಳದಿಂದ ಖಾದಿ ವ್ಯಾಪಾರಿಗಳು ಮತ್ತು ಗ್ರಾಹಕರ ನಡುವೆ ನೇರ ವಹಿವಾಟು ಸಂಪರ್ಕ ಬೆಳೆಯಲಿದ್ದು, ಮಧ್ಯವರ್ತಿಗಳ ಹಾವಳಿ ತಪ್ಪಲಿದೆ ಎಂದರು.ಖಾದಿ ಗ್ರಾಮೋದ್ಯೋಗ ಉತ್ಸವವನ್ನು ಜಿಲ್ಲಾಮಟ್ಟ, ವಲಯಮಟ್ಟ, ರಾಜ್ಯಮಟ್ಟ ಎಂದು ಮೂರು ವಿಭಾಗದಲ್ಲಿ ಆಯೋಜಿಸಲಾಗುತ್ತದೆ. ಪ್ರಸಕ್ತ 2018-19ನೇ ಸಾಲಿನ ಮೊದಲ ರಾಜ್ಯಮಟ್ಟದ ಖಾದಿ ಗ್ರಾಮೋದ್ಯೋಗ ವಸ್ತು ಪ್ರದರ್ಶನ ಮತ್ತು ಮಾರಾಟವನ್ನು ಬಳ್ಳಾರಿಯಲ್ಲಿ ಆ.14 ರಿಂದ ಚಾಲನೆ ಪಡೆದುಕೊಳ್ಳಲಿದೆ. ಬಳಿಕ ಸೆಪ್ಟೆಂಬರ್ ತಿಂಗಳಲ್ಲಿ ಕಲಬುರ್ಗಿ, ಅಕ್ಟೋಬರ್ ತಿಂಗಳಲ್ಲಿ ಮೈಸೂರು, ವಿಜಯಪುರ, ಡಿಸೆಂಬರ್ ತಿಂಗಳಲ್ಲಿ ತುಮಕೂರು, ಬೆಂಗಳೂರು ಮತ್ತು ಮಂಡ್ಯ ಜಿಲ್ಲೆಯಲ್ಲಿ ವಲಯ ಮಟ್ಟದ ಖಾದಿ ಗ್ರಾಮೋದ್ಯೋಗ ಮೇಳವನ್ನು ಆಯೋಜಿಸಲಾಗುತ್ತದೆ ಎಂದವರು ತಿಳಿಸಿದರು. ಮೇಳವನ್ನು ಆ.14 ರಂದು ಬೆಳಗ್ಗೆ 11ಕ್ಕೆ ಸಣ್ಣ ಕೈಗಾರಿಕೆ ಸಚಿವ ಎಸ್.ಆರ್. ಶ್ರೀನಿವಾಸ್ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ ಮಳಿಗೆಗಳಿಗೆ ಚಾಲನೆ ನೀಡುವರು. ಜಿಪಂ ಅಧ್ಯಕ್ಷೆ ಸಿ. ಭಾರತಿ ತಿಮ್ಮಾರೆಡ್ಡಿ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡುವರು. ಶಾಸಕ ಜಿ. ಸೋಮಶೇಖರರೆಡ್ಡಿ ಅಧ್ಯಕ್ಷತೆ ವಹಿಸುವರು. ಡಿಸಿ ರಾಮ್ ಪ್ರಸಾತ್ ಮನೋಹರ್, ಜಿಪಂ ಸಿಇಒ ಡಾ| ಕೆ.ವಿ.ರಾಜೇಂದ್ರ, ಎಸ್ಪಿ ಅರುಣ್ ರಂಗರಾಜನ್ ಸೇರಿದಂತೆ ಜಿಲ್ಲೆಯ ವಿವಿಧ ಕ್ಷೇತ್ರಗಳ ಶಾಸಕರು, ಪಾಲಿಕೆ ಮೇಯರ್, ಸದಸ್ಯರು ಇತರರು ಉಪಸ್ಥಿತರಿರುವರು. ಮಂಡಳಿಯ ಉಪಮುಖ್ಯ ಕಾರ್ಯದರ್ಶಿ ಸೋಮನಾಥ್, ಜಿಲ್ಲಾಖಾದಿ ಮತ್ತು ಗ್ರಾಮೋದ್ಯೋಗದ ಅಧಿಕಾರಿ ಗೋವಿಂದಪ್ಪ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ. ರಾಮಲಿಂಗಪ್ಪ ಇದ್ದರು