Advertisement

ಕೆನಡಾದಲ್ಲಿ ಭಾರತಕ್ಕೆ ಬೇಕಾಗಿದ್ದ ಖಲಿಸ್ಥಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ

11:39 AM Jun 19, 2023 | Team Udayavani |

ಸರ್ರೆ: ಭಾರತ ಸರ್ಕಾರಕ್ಕೆ ಬೇಕಾಗಿದ್ದ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಕೆನಡಾದ ಸರ್ರೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಹತನಾಗಿದ್ದಾನೆ.

Advertisement

ಇತ್ತೀಚೆಗೆ, ಭಾರತ ಸರ್ಕಾರ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ನಿಜ್ಜರ್‌ ನ ಹೆಸರನ್ನು ಸೇರಿಸಲಾಗಿದ್ದು, ಇತರ 40 ನಿಯೋಜಿತ ಭಯೋತ್ಪಾದಕರನ್ನು ಹೆಸರಿಸಲಾಗಿತ್ತು.

2022 ರಲ್ಲಿ, ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಪಂಜಾಬ್‌ ನ ಜಲಂಧರ್‌ ನಲ್ಲಿ ಹಿಂದೂ ಅರ್ಚಕನನ್ನು ಕೊಲ್ಲಲು ಸಂಚು ರೂಪಿಸಿದ ಪ್ರಕರಣದ ಬಳಿಕ ನಿಜ್ಜರ್‌ ತಲೆಗೆ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿತು.

ಕೆನಡಾದಲ್ಲಿ ನೆಲೆಸಿದ್ದ ಹರ್ದೀಪ್ ಸಿಂಗ್ ಕೆಟಿಎಫ್ ನ ಮುಖ್ಯಸ್ಥರಾಗಿದ್ದ.

ಈ ಹಿಂದೆ, ಭಾರತದ ವಿರುದ್ಧ ಭಯೋತ್ಪಾದಕ ಕೃತ್ಯಗಳಿಗೆ ಸಂಚು ರೂಪಿಸಿದ ಪ್ರಕರಣದಲ್ಲಿ ನಿಜ್ಜರ್ ವಿರುದ್ಧ ಎನ್‌ ಐಎ ಚಾರ್ಜ್‌ಶೀಟ್ ಕೂಡ ಸಲ್ಲಿಸಿತ್ತು.

Advertisement

Advertisement

Udayavani is now on Telegram. Click here to join our channel and stay updated with the latest news.

Next