Advertisement

Threat: ಪಂಜಾಬ್ ಸಿಎಂ ಮತ್ತು DGP ಗೆ ಜೀವ ಬೆದರಿಕೆ ಹಾಕಿದ ಖಾಲಿಸ್ತಾನಿ ಭಯೋತ್ಪಾದಕ ಪನ್ನೂನ್

01:07 PM Jan 16, 2024 | Team Udayavani |

ಚಂಡೀಗಢ: ದೇಶದ ಗಣ್ಯ ವ್ಯಕ್ತಿಗಳನ್ನು ಕೊಲ್ಲುವುದಾಗಿ ಬೆದರಿಕೆ ಹಾಕುತ್ತಲೇ ಹೆಸರುವಾಸಿಯಾಗಿರುವ ಖಾಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ಇದೀಗ ಹೊಸ ಬೆದರಿಕೆ ಹಾಕಿದ್ದಾನೆ.

Advertisement

ಗಣರಾಜ್ಯೋತ್ಸವದಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ರಾಜ್ಯ ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ಅವರನ್ನು ಕೊಲ್ಲುವುದಾಗಿ ಖಲಿಸ್ತಾನಿ ಭಯೋತ್ಪಾದಕ ಪನ್ನುನ್ ಮಂಗಳವಾರ ಬೆದರಿಕೆ ಹಾಕಿದ್ದಾನೆ.

ಸಿಖ್ ಫಾರ್ ಜಸ್ಟಿಸ್ (SFJ) ಸಂಸ್ಥಾಪಕ ಮತ್ತು ಭಯೋತ್ಪಾದಕ ಪನ್ನುನ್, ಭಾರತೀಯ ಸಂಸ್ಥೆಗಳು ಮತ್ತು ಅಧಿಕಾರಿಗಳ ವಿರುದ್ಧ ನೀಡಿದ ಬೆದರಿಕೆಗಳ ಸರಣಿಯಲ್ಲಿ ಇದು ಇತ್ತೀಚಿನದು ಎನ್ನಲಾಗಿದೆ. ಕಳೆದ ತಿಂಗಳು, ಅವರು ಡಿಸೆಂಬರ್ 13 ಕ್ಕೂ ಮೊದಲು ಭಾರತೀಯ ಸಂಸತ್ತಿನ ಮೇಲೆ ದಾಳಿ ಮಾಡುವುದಾಗಿ ಖಲಿಸ್ತಾನಿ ನಾಯಕ ಹೇಳಿದ ವೀಡಿಯೊವನ್ನು ಬಿಡುಗಡೆ ಮಾಡಿದ್ದ. ಅದಕ್ಕೂ ಮೊದಲು ಖಲಿಸ್ತಾನಿ ಭಯೋತ್ಪಾದಕನಿಂದ ಮತ್ತೊಂದು ವೀಡಿಯೋ ಬಿಡುಗಡೆಯಾಗಿತ್ತು ಅದರಲ್ಲಿ ಅವರು ನವೆಂಬರ್ 19 ರಂದು ಏರ್ ಇಂಡಿಯಾದಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಜೀವ ಬೆದರಿಕೆ ಹಾಕಿದ್ದ.

2019 ರಲ್ಲಿ “ರಾಷ್ಟ್ರ ವಿರೋಧಿ ಮತ್ತು ವಿಧ್ವಂಸಕ” ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ ಎಂದು ಉಲ್ಲೇಖಿಸಿ ಕೇಂದ್ರವು 2020 ರಲ್ಲಿ ಪನ್ನುನ್ ಅನ್ನು “ವೈಯಕ್ತಿಕ ಭಯೋತ್ಪಾದಕ” ಎಂದು ಹೇಳಿತ್ತು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next