Advertisement

Aryavardhan Guruji: ಸುದೀಪ್‌ ಬಳಿ ಆರ್ಯವರ್ಧನ್‌ ಗುರೂಜಿ ಕ್ಷಮೆ ಕೋರಲು ಆಗ್ರಹ

11:03 AM Nov 18, 2023 | Team Udayavani |

ಬೆಂಗಳೂರು: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಗಳಿಗೆ ನೀಡುವ ಕಿಚ್ಚನ ಚಪ್ಪಾಳೆ ಬಗ್ಗೆ ಆರ್ಯವರ್ಧನ್‌ ಗುರೂಜಿ ಹಗುರವಾಗಿ ಮಾತನಾಡಿ ಕಿಚ್ಚ ಸುದೀಪ್‌ ಅಭಿಮಾನಿಗಳ ಕೋಪಕ್ಕೆ ತುತ್ತಾಗಿದ್ದು, ಚಾಮರಾಜಪೇಟೆಯಲ್ಲಿರುವ ಆರ್ಯವರ್ಧನ್‌ ಕಚೇರಿಗೆ ಬಂದು ಈ ಬಗ್ಗೆ ಪ್ರಶ್ನಿಸಿದ್ದಾರೆ.

Advertisement

ಚಾಮರಾಜಪೇಟೆಯಲ್ಲಿರುವ ಆರ್ಯವರ್ಧನ್‌ ಗುರೂಜಿ ಕಚೇರಿಗೆ ಶುಕ್ರವಾರ ಕಿಚ್ಚ ಸುದೀಪ್‌ ಅಭಿಮಾನಿ ಗಳು ಭೇಟಿ ನೀಡಿದ್ದರು. ಸುದೀಪ್‌ ಅಭಿಮಾನಿಗಳ ಸಂಘದ ಅಧ್ಯಕ್ಷ ನವೀನ್‌ ಗೌಡ ಹಾಗೂ ಬೆಂಬಲಿಗರು ಆರ್ಯವರ್ಧನ್‌ ಗುರೂಜಿ ಅವರನ್ನೇ ತರಾಟೆಗೆ ತೆಗೆದುಕೊಂಡ ಪ್ರಸಂಗವೂ ನಡೆಯಿತು. ಕಿಚ್ಚ ಸುದೀಪ್‌ ಬಗ್ಗೆ ಲೇವಡಿ ಮಾಡಿ ಏಕೆ ಮಾತಾಡ್ತಿದ್ದೀರಾ? ಎಂದು ಪ್ರಶ್ನಿಸಿದ್ದಾರೆ. ಸುದೀಪ್‌ ಅವರ ಮುಂದೆ ಬಂದು ಕ್ಷಮೆ ಕೇಳಬೇಕೆಂದು ಪಟ್ಟು ಹಿಡಿದಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚೆಗೆ ಆರ್ಯವರ್ಧನ್‌ ಗುರೂಜಿ ಕಿಚ್ಚನ ಚಪ್ಪಾಳೆ ಯಾರಿಗೂ ಬೇಕಾಗಿಲ್ಲ ಎಂದಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next