Advertisement

ಸುದೀಪ್ ಆರೋಗ್ಯದಲ್ಲಿ ಚೇತರಿಕೆ : ವೈದ್ಯರಿಗೆ-ಅಭಿಮಾನಿಗಳಿಗೆ ಕಿಚ್ಚನ ಧನ್ಯವಾದ  

12:29 PM Apr 29, 2021 | Team Udayavani |

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಚೇತರಿಸಿಕೊಂಡಿದ್ದಾರೆ. ತಾವು ಗುಣಮುಖರಾಗಿರುವುದನ್ನು ಇಂದು ( ಗುರುವಾರ) ಟ್ವಿಟ್ ಮಾಡಿ ತಿಳಿಸಿದ್ದಾರೆ.

Advertisement

ಕಳೆದ ಕೆಲವು ದಿನಗಳಿಂದ ಕಿಚ್ಚ ಸುದೀಪ್​ ಅವರ ಆರೋಗ್ಯದಲ್ಲಿ ವ್ಯತ್ಯಯ ಆಗಿತ್ತು. ಶೂಟಿಂಗ್​ ಚಟುವಟಿಕೆಗಳಿಗೆ ಸಂಪೂರ್ಣ ಬ್ರೇಕ್​ ಹಾಕಿ ಅವರು ವಿಶ್ರಾಂತಿ ಪಡೆಯುತ್ತಿದ್ದರು. ಕಿಚ್ಚನ ಆರೋಗ್ಯಕ್ಕಾಗಿ ಲಕ್ಷಾಂತರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದರು. ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಮಾಡಿಸಿದ್ದರು. ಇದೀಗ ಅಭಿಮಾನಿಗಳ ಪ್ರಾರ್ಥನೆ ಫಲಿಸಿದ್ದು, ಕರುನಾಡ ಬಾದ್ ಷಾ ಅವರು ಆರೋಗ್ಯವಾಗಿದ್ದಾರೆ.

ತಮ್ಮ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ಸುದೀಪ್, ತಮಗಾಗಿ ಪ್ರಾರ್ಥಿಸಿ, ಹಾರೈಸಿದ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ. ತಮ್ಮ ಆರೋಗ್ಯ ಸುಧಾರಿಸಿದೆ. ಮುಂದಿನ ವಾರದ ಬಿಗ್‍ಬಾಸ್ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದಾರೆ.

ತಮ್ಮ ಆರೋಗ್ಯದ ಕಾಳಜಿ ವಹಿಸಿದ ಡಾ.ವೆಂಕಟೇಶ್, ಡಾ.ವಿನಯ್ ಅವರಿಗೂ ಸುದೀಪ್ ಧನ್ಯವಾದ ಹೇಳಿದ್ದು, ತಮ್ಮ ಆರೋಗ್ಯ ಸುಧಾರಣೆಗಾಗಿ ಪ್ರಾರ್ಥಿಸಿದ, ಹಾರೈಸಿದ ಹಲವಾರು ವಿಡಿಯೋ ತುಣುಕುಗಳು, ಸಂದೇಶಗಳನ್ನು ನಾನು ನೋಡಿದ್ದೇನೆ. ಎಲ್ಲರಿಗೂ ಧನ್ಯವಾದಗಳು, ಐ ಲವ್ ಯು ಆಲ್ ಎಂದಷ್ಟೇ ಹೇಳಬಲ್ಲೆ ಎಂದು ಸುದೀಪ್ ಟ್ವಿಟ್ ಮಾಡಿದ್ದಾರೆ.

ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೀಡಾದ ಸುದೀಪ್ ಬಿಗ್ ಬಾಗ್ ವಾರಾಂತ್ಯದ ಸರಣಿ ಕಾರ್ಯಕ್ರಮದಿಂದ ದೂರ ಉಳಿದಿದ್ದರು. ಸುದೀಪ್ ಆರೋಗ್ಯಕ್ಕೆ ಏನಾಗಿದೆ ಎಂದು ತಿಳಿಯದೆ ಗೊಂದಲವಾಗಿತ್ತು. ಸುದೀಪ್ ಅವರ ಪತ್ನಿ ಹೇಳಿಕೆಯೊಂದನ್ನು ನೀಡಿ, ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎಂದು ತಿಳಿಸಿದ್ದರು. ಅದರ ಹೊರತಾಗಿ ಏನಾಗಿದೆ, ಹೇಗಿದ್ದಾರೆ ಎಂಬ ಮಾಹಿತಿಯನ್ನು ಗೌಪ್ಯವಾಗಿಡಲಾಗಿತ್ತು.

Advertisement

Advertisement

Udayavani is now on Telegram. Click here to join our channel and stay updated with the latest news.

Next