Advertisement

ಸಿಎಂ ಭೇಟಿಯಾದ ಸುದೀಪ್ : ಚಿತ್ರರಂಗದ ಸಮಸ್ಯೆಗಳ ಕುರಿತು ಚರ್ಚೆ

05:49 PM Aug 31, 2021 | Team Udayavani |

ಬೆಂಗಳೂರು: ಕನ್ನಡ ಚಿತ್ರರಂಗದ ಸೂಪರ್ ಸ್ಟಾರ್ ಕಿಚ್ಚ ಸುದೀಪ್ ಅವರಿಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದಾರೆ.

Advertisement

ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಕೆಲ ಸಮಯ ಸೌಹಾರ್ದಯುತ ಮಾತುಕತೆ ನಡೆಸಿದ್ದಾರೆ. ಬಸವರಾಜ ಬೊಮ್ಮಾಯಿ ಸಿಎಂ ಆಗುವುದಕ್ಕಿಂತಲೂ ಮುನ್ನವೇ ಸುದೀಪ್​ ಕುಟುಂಬದ ಜೊತೆ ಉತ್ತಮ ಒಡನಾಟ ಹೊಂದಿದ್ದರು. ಅಷ್ಟೇ ಅಲ್ಲ, ಸುದೀಪ್​ ವೃತ್ತಿಜೀವನದ ಆರಂಭದ ದಿನಗಳಲ್ಲಿ ಬಸವರಾಜ ಬೊಮ್ಮಾಯಿ ಬೆಂಬಲವಾಗಿ ನಿಂತಿದ್ದರು. ಆ ಬಗ್ಗೆ ಸುದೀಪ್​ ಇತ್ತೀಚೆಗೆ ಟ್ವೀಟ್​ ಮಾಡಿದ್ದರು.

ಸುದೀಪ್ ಅವರು ಭೇಟಿಯಾಗಿರುವ ವಿಚಾರವನ್ನು ಟ್ವೀಟ್ ಮಾಡಿ ತಿಳಿಸಿರುವ ಮುಖ್ಯಮಂತ್ರಿಗಳು, ಕನ್ನಡ ಚಿತ್ರರಂಗದ ಹಲವು ಸಮಸ್ಯೆಗಳ ಕುರಿತು ಚರ್ಚಿಸಿದೆವು. ಸುದೀಪ್ ಅವರ ಜೊತೆಗಿನ ಮಾತುಕತೆ ಮದುರವಾಗಿತ್ತು. ನಿಮ್ಮ ಮುಂದಿನ ಯೋಜನೆಗಳಿಗೆ ಶುಭವಾಗಲಿ ಎಂದು ಹಾರೈಸಿದ್ದಾರೆ.

ಇನ್ನು ಅಭಿನಯ ಚಕ್ರವರ್ತಿ ಸುದೀಪ್ ನಟಿಸಿರುವ ಬಹುನೀರಿಕ್ಷಿತ ಸಿನಿಮಾ ವಿಕ್ರಾಂತ್ ರೋಣಾ ಬಿಡುಗಡೆಗೆ ಸಿದ್ಧವಾಗಿದೆ. ದಿನಕ್ಕೊಂದು ಕ್ಯೂರಾಸಿಟಿ ಹುಟ್ಟಿಸುವ ರೀತಿ ಸಿನಿಮಾದ ಪಾತ್ರ ಪರಿಚಯ, ಪೋಸ್ಟರ್ ಬಿಡುಗಡೆ ಮಾಡುತ್ತಾ ಅಭಿಮಾನಿಗಳಲ್ಲಿ ಇನ್ನಷ್ಟು ನೀರಿಕ್ಷೆಯನ್ನು ಹೆಚ್ಚು ಮಾಡಿದೆ. ವಿಕ್ರಾಂತ್ ರೋಣ ಸಿನಿಮಾದ ಆಡಿಯೋ ಹಕ್ಕನ್ನು ಲಹರಿ ಮ್ಯೂಸಿಕ್ ಸಂಸ್ಥೆ ಭಾರೀ ಮೊತ್ತಕ್ಕೆ ಖರೀದಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next