Advertisement

Mangaluru: ವಿದ್ಯಾರ್ಥಿಗಳ ಅಪಹರಣ, ಹಲ್ಲೆ ಪ್ರಕರಣ; ಮೂವರು ವಿದ್ಯಾರ್ಥಿಗಳ ಬಂಧನ

08:59 PM Aug 21, 2024 | Team Udayavani |

ಮಂಗಳೂರು: ವಿದ್ಯಾರ್ಥಿಗಳನ್ನು ಅಪಹರಿಸಿ ಅಮಾನುಷವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಗರದ ಮೂವರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.

Advertisement

ಅಫ್ನಾನ್‌, ದಿಯಾನ್‌ ಮತ್ತು ಸಲ್ಮಾನ್‌ ಬಂಧಿತ ವಿದ್ಯಾರ್ಥಿಗಳು.

ಇವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಘಟನೆಗೆ ಸಂಬಂಧಿಸಿದಂತೆ ಇನ್ನು 4ರಿಂದ 5 ವಿದ್ಯಾರ್ಥಿಗಳ ಬಂಧನ ಬಾಕಿ ಇದೆ ಎಂದು ತಿಳಿದುಬಂದಿದೆ.

ಫ‌ುಟ್ಬಾಲ್‌ ಪಂದ್ಯಾಟದ ಬಳಿಕ ಉಂಟಾದ ಗಲಾಟೆಯ ಹಿನ್ನೆಲೆಯಲ್ಲಿ ಕಾಲೇಜು ವಿದ್ಯಾರ್ಥಿಗಳ ತಂಡವೊಂದು ಮೂವರು ವಿದ್ಯಾರ್ಥಿಗಳನ್ನು ಅಪಹರಿಸಿ ವಿವಸ್ತ್ರಗೊಳಿಸಿ ಅಮಾನುಷವಾಗಿ ಹಲ್ಲೆಗೈದು ಅದರ ವೀಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿತ್ತು.

Advertisement

Udayavani is now on Telegram. Click here to join our channel and stay updated with the latest news.

Next