Advertisement

Prajwal Revanna Case ಅಪಹರಣ ಪ್ರಕರಣ: ಭವಾನಿಗೆ ನಿರೀಕ್ಷಣ ಜಾಮೀನು

12:12 AM Jun 19, 2024 | Team Udayavani |

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಅವರ ತಾಯಿ ಭವಾನಿ ರೇವಣ್ಣ ಸಲ್ಲಿಸಿರುವ ಅರ್ಜಿಯನ್ನು ಮಾನ್ಯ ಮಾಡಿದ ಹೈಕೋರ್ಟ್‌, ಷರತ್ತುಬದ್ಧ ನಿರೀಕ್ಷಣ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

Advertisement

ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ಮಂಗಳವಾರ ಪ್ರಕಟಿಸಿರುವ ನ್ಯಾ| ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, ಕೆಲವು ಷರತ್ತುಗಳನ್ನು ವಿಧಿಸಿ ನಿರೀಕ್ಷಣ ಜಾಮೀನು ನೀಡಿ ಆದೇಶಿಸಿತು.

ಭವಾನಿ ರೇವಣ್ಣ ತನಿಖೆಗೆ ಸಹಕರಿಸುತ್ತಿಲ್ಲ ಎಂಬ ಪ್ರಾಸಿಕ್ಯೂಷನ್‌ ವಾದವನ್ನು ತಳ್ಳಿ ಹಾಕಿರುವ ನ್ಯಾಯಾಲಯ, ಪೊಲೀಸರು 3 ದಿನಗಳ ಅವಧಿಯಲ್ಲಿ ಒಟ್ಟು 85 ಪ್ರಶ್ನೆಗಳನ್ನು ಕೇಳಿದ್ದಾರೆ. ಎಲ್ಲ ಪ್ರಶ್ನೆಗಳಿಗೂ ಅರ್ಜಿದಾರರು ಉತ್ತರಿಸಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.

 

Advertisement

Udayavani is now on Telegram. Click here to join our channel and stay updated with the latest news.

Next