Advertisement

Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್‌; ಯುವಕನ ವಿರುದ್ಧ ಎಫ್ಐಆರ್‌

10:36 AM Jul 02, 2024 | Team Udayavani |

ಬೆಂಗಳೂರು: ಯುವಕನೊಬ್ಬ ತಮ್ಮ ಅಪ್ರಾಪ್ತ ಪುತ್ರಿಯನ್ನು ಅಪಹರಿಸಿದ್ದಾನೆ ಎಂದು ಆರೋಪಿಸಿ ಬಾಲಕಿಯ ಪಾಲಕರು ಕೊಡಿಗೇಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

Advertisement

ದೂರಿನ ಹಿನ್ನೆಲೆಯಲ್ಲಿ ಶಿವಶಂಕರ್‌ ಎಂಬಾತನ ವಿರುದ್ಧ ದೂರು ದಾಖಲಿಸಿಕೊಂಡಿರುವ ಪೊಲೀಸರು, ಸಂತ್ರಸ್ತೆ ಹಾಗೂ ಆರೋಪಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಅಬ್ದುಲ್‌ ನಾಹಿಂ ಮತ್ತು ರಜಿಯಾ ಎಂಬುವವರ 16 ವರ್ಷದ ಪುತ್ರಿಯನ್ನು ಶಿವಶಂಕರ್‌(22) ಅಪಹರಿಸಿರುವ ಆರೋಪ ಕೇಳಿ ಬಂದಿದೆ.

ಪಾಲಕರು ತಮ್ಮ ಪುತ್ರಿಯನ್ನು ಕಾಲೇಜಿಗೆ ಬಿಟ್ಟು ಬಂದಿದ್ದು, ಆದರೆ ಆಕೆ ಕಾಲೇಜಿನಿಂದ ವಾಪಸ್‌ ಬಂದಿಲ್ಲ. ಜತೆಗೆ ಆಕೆಯ ಮೊಬೈಲ್‌ ಸ್ವಿಚ್ಡ್ ಆಫ್‌ ಆಗಿರುವ ಹಿನ್ನೆಲೆಯಲ್ಲಿ ಅವಳಿಗಾಗಿ ಎಲ್ಲಾ ಕಡೆ ಹುಡುಕಾಟ ನಡೆಸಿದ ಪಾಲಕರು ಅಂತಿಮವಾಗಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ‌

ಶಿವಶಂಕರ್‌ ಬಾಲಕಿಯನ್ನು ದ್ವಿಚಕ್ರ ವಾಹನದಲ್ಲಿ ಕರೆದೊಯ್ದರಿರುವ ಶಂಕೆಯ ಹಿನ್ನೆಲೆಯಲ್ಲಿ ಮೊಬೈಲ್‌ ಟವರ್‌ ಟ್ರೇಸ್‌ ಮಾಡಿ ಪರಿಶೀಲನೆ ನಡೆಸಿದ ಪೊಲೀಸರಿಗೆ ಶಿವಶಂಕರ್‌ನ ದ್ವಿಚಕ್ರವಾಹನ ಚಿಕ್ಕಬಳ್ಳಾಪುರದಲ್ಲಿ ಪತ್ತೆಯಾಗಿದೆ. ಮತ್ತೂಂದೆಡೆ ಸಿಸಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಿದ್ದಾಗ ಆಂಧ್ರದ ಕರ್ನೂಲ್‌ಗೆ ತೆರಳಿರುವುದು ಪತ್ತೆಯಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next