Advertisement

ಕಿಕ್ಕೇರಿ ಕೃಷ್ಣಮೂರ್ತಿ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ

11:16 PM Jul 21, 2019 | Lakshmi GovindaRaj |

ಬೆಂಗಳೂರು: ಹಿರಿಯ ಸುಗಮ ಸಂಗೀತ ಗಾಯಕ ಡಾ. ಕಿಕ್ಕೇರಿ ಕೃಷ್ಣಮೂರ್ತಿ ಅವರು ಧಾರವಾಡದ “ಕರ್ನಾಟಕ ಬಾಲವಿಕಾಸ ಅಕಾಡೆಮಿ’ಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಈ ಬಗ್ಗೆ ಸರ್ಕಾರ ಭಾನುವಾರ ಅಧಿಕೃತ ಆದೇಶ ಹೊರಡಿಸಿದ್ದು, ಸೋಮವಾರ ಡಾ.ಕಿಕ್ಕೇರಿ ಕೃಷ್ಣಮೂರ್ತಿ ಅವರು ಅಕಾಡೆಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

Advertisement

ಈ ಕುರಿತು “ಉದಯವಾಣಿ’ಯೊಂದಿಗೆ ಮಾತನಾಡಿದ ಕಿಕ್ಕೇರಿ ಕೃಷ್ಣಮೂರ್ತಿ ಸಂತಸ ವ್ಯಕ್ತಪಡಿಸಿದರು. ಈಗಾಗಲೇ ನಾನು ಹಲವು ಮಕ್ಕಳಿಗೆ ಸಂಗೀತ ಪಾಠ ಹೇಳಿಕೊಟ್ಟಿದ್ದೇನೆ. ಈಗ ಸರ್ಕಾರ ಮತ್ತೆ ಮಕ್ಕಳ ಏಳ್ಗೆಯ ಜವಾಬ್ದಾರಿ ನೀಡಿದೆ. ಆ ನಂಬಿಕೆಯನ್ನು ಉಳಿಸಿಕೊಳ್ಳುವ ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯದಾದ್ಯಂತ ಪ್ರವಾಸ ಮಾಡಿ ಗ್ರಾಮೀಣ ಪ್ರದೇಶದ ಬಡ ಮತ್ತು ಅನಾಥ ಮಕ್ಕಳ ಏಳ್ಗೆಗೆ ಶ್ರಮಿಸುವುದಾಗಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next