Advertisement

ಒಳ ನುಸುಳಿದ ಉಗ್ರನ ಹತ್ಯೆ

09:14 PM Aug 06, 2023 | Team Udayavani |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಎಲ್‌ಒಸಿಯಿಂದ ಒಳನುಸುಳಲು ಯತ್ನಿಸಿದ ಉಗ್ರನನ್ನು ಭದ್ರತಾ ಪಡೆಗಳು ಕೊಂದು ಹಾಕಿವೆ. ತಾಂಗ್‌ಧರ್‌ ವಲಯದಲ್ಲಿ ಪೊಲೀಸರು ಮತ್ತು ಸೇನೆ ನಡೆಸಿದ ಕಾರ್ಯಾಚರಣೆ ವೇಳೆ ಈ ಘಟನೆ ನಡೆದಿದೆ. ಉಗ್ರರಿಗಾಗಿ ಶೋಧ ನಡೆಸುತ್ತಿರುವ ವೇಳೆ ಒಳ ನುಸುಳುವಿಕೆಯ ಬಗ್ಗೆ ಮಾಹಿತಿ ಸಿಕ್ಕಿತ್ತು. ಅದನ್ನು ಆಧರಿಸಿ ಕಾರ್ಯಾಚರಣೆ ನಡೆಸಿದಾಗ ಉಗ್ರನ ಜತೆಗೆ ಗುಂಡಿನ ಚಕಮಕಿ ನಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಇದೇ ವೇಳೆ, ರಜೌರಿಯಲ್ಲಿನ ಎನ್‌ಕೌಂಟರ್‌ ಭಾನುವಾರವೂ ಮುಂದುವರಿದಿದೆ. ಸೇನೆಯ ವತಿಯಿಂದ ವಿಶೇಷ ಕಮಾಂಡೋಗಳನ್ನು ನಿಯೋಜಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next