Advertisement

ಕೋವಿಡ್ ವಿಚಾರದಲ್ಲಿ ತಜ್ಞರು ಕೊಡುವ ವರದಿಯನ್ನು ಸರಕಾರ ಮೊದಲು ಅನುಸರಿಸಲಿ : ಕಿಮ್ಮನೆ

02:43 PM Sep 01, 2021 | Team Udayavani |

ಚಿಕ್ಕಮಗಳೂರು : ಕೋವಿಡ್ ವಿಚಾರದಲ್ಲಿ ತಜ್ಞರು ಕೊಡುವ ವರದಿಯನ್ನು ಸರಕಾರ ಮೊದಲು ಅನುಸರಿಸಲಿ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದ್ದಾರೆ.

Advertisement

ಶಾಲಾ – ಕಾಲೇಜು ಆರಂಭಕ್ಕೆ ಕರ್ನಾಟಕ ಸರಕಾರ ಹಸಿರು ನಿಶಾನೆ ನೀಡಿದ ಹಿನ್ನೆಲೆಗೆ ಪ್ರತಿಕ್ರೀಯಿಸಿದ ಮಾಜಿ ಸಚಿವರು, ಸರ್ಕಾರ ತಜ್ಞರ ವರದಿಯ ವಿರುದ್ಧ ಕಾರ್ಯಕ್ರಮಗಳನ್ನ ಮಾಡಬಾರದು, ತಜ್ಞರು ಕೊಡುವ ವರದಿಯನ್ನ ಸರ್ಕಾರ ಫಾಲೋ ಮಾಡಲಿ, ಒಂದು ವೇಳೆ ತಜ್ಞರೇ ತಪ್ಪು ವರದಿ ನೀಡಿದರೆ ನಾವೇನು ಮಾಡಲು ಆಗುವುದಿಲ್ಲ ಎಂದು ಹೇಳಿದರು.

ತಜ್ಞರು ಸಾಮಾನ್ಯ ಅಭಿಪ್ರಾಯ ನೀಡುವುದಿಲ್ಲ, ಕೋವಿಡ್ ಸೋಂಕಿನ ಕುರಿತು ಸಾಕಷ್ಟು ಅಧ್ಯಯನ ನಡೆಸಿ ಹಿಂದಿನ ಫಲಿತಾಂಶ ಆಧರಿಸಿ ಮುಂದಾಗೋ ದುರಂತದ ಬಗ್ಗೆ ಅಭಿಪ್ರಾಯ ನೀಡಿರುತ್ತಾರೆ, ತಜ್ಞರ ವರದಿ ವಿರುದ್ಧ ನಡೆದದ್ದೇ ಈಗಾಗಿರೋ ಅನಾಹುತಗಳಿಗೆ ಕಾರಣ, ಈಗಾಗಿರೋ ಎಲ್ಲಾ ಅನಾಹುತಗಳಿಗೆ ಸರ್ಕಾರವೇ ನೇರ ಹೊಣೆ ಎಂದರು.

ಇದನ್ನೂ ಓದಿ :ಅರಣ್‌ಸಿಂಗ್ ರಾಜ್ಯಕ್ಕೆ ಬರೋದೇ ದುಡ್ಡು ವಸೂಲಿ ಮಾಡೋದಕ್ಕೆ : ಹೆಚ್.ಡಿ.ಕೆ ವಾಗ್ದಾಳಿ

ಲಸಿಕಾ ವಿತರಣೆ ಕುರಿತು ಮಾತನಾಡಿದ ಮಾಜಿ ಸಚಿವರು ದೇಶಾದ್ಯಂತ ಲಸಿಕಾ ವಿತರಣಾ ಕಾರ್ಯಕ್ರಮವೇ ದೊಡ್ಡ ತಪ್ಪು, ಮೋದಿ ಮಾಡಿದ ತಪ್ಪನ್ನ ರಾಜ್ಯಗಳು ಮಾಡುತ್ತಿವೆ, ಮೊದಲು ಜನಸಂಖ್ಯೆಯಷ್ಟು ಲಸಿಕೆ ಇದೆಯಾ ಎಂದು ನೋಡಿಕೊಂಡು ಹೇಳಿಕೆ ನೀಡಬೇಕು,

Advertisement

ಜನರು ಲಸಿಕಾ ಕೇಂದ್ರಕ್ಕೆ ತೆರಳಿದರೆ ಲಸಿಕೆ ಲಭ್ಯವಿಲ್ಲ ನಾಳೆ ನೀಡುತ್ತೇವೆ ಎಂದು ಹೇಳುತ್ತಾರೆ, ಮರುದಿನ ಬೆಳಿಗ್ಗೆ ಹೋದರೆ ವ್ಯಾಕ್ಸಿನ್ ಇಲ್ಲ ಅಂತಾರೆ ಎಂದು ಕಿಡಿಕಾರಿದರು.

Advertisement

Udayavani is now on Telegram. Click here to join our channel and stay updated with the latest news.

Next