Advertisement

ಆರಗ ಜ್ಞಾನೇಂದ್ರ ತೀರ್ಥಹಳ್ಳಿಗೆ ಮಾತ್ರ ಗೃಹಸಚಿವರಾಗಿದ್ದಾರೆ: ಕಿಮ್ಮನೆ ರತ್ನಾಕರ್ ವಾಗ್ದಾಳಿ

12:29 PM Nov 22, 2021 | keerthan |

ಶಿವಮೊಗ್ಗ: ಆರಗ ಜ್ಞಾನೇಂದ್ರ ಅವರು ಇಡೀ ರಾಜ್ಯಕ್ಕೆ ಗೃಹ ಮಂತ್ರಿಯಾಗಿಲ್ಲ. ಬದಲಾಗಿ ತೀರ್ಥಹಳ್ಳಿಗೆ ಮಾತ್ರ ಗೃಹಸಚಿವರಾಗಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ವಾಗ್ದಾಳಿ ನಡೆಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರಗ ಜ್ಞಾನೇಂದ್ರ ಅವರು ಸಚಿವರಾದಾಗ ನಾನೂ ಶುಭ ಹಾರೈಸಿದ್ದೆ. ಆದರೆ ಇದೀಗ ಅವರು ನಡೆದುಕೊಳ್ಳುವ ರೀತಿ ನೋಡಿದರೆ ತೀರ್ಥಹಳ್ಳಿ ಮರ್ಯಾದೆ ತೆಗೆಯುವ ಕೆಲಸ ಮಾಡುತ್ತಿದ್ದಾರೆ. ತೀರ್ಥಹಳ್ಳಿಯ ಪೊಲೀಸ್ ಠಾಣೆಗಳು ಹಾಗೂ ಆರ್ ಎಫ್ ಕಚೇರಿಗೆ ಮಾತ್ರ ಆರಗ ಸೀಮಿತರಾಗಿದ್ದಾರೆ ಎಂದರು.

ಇದನ್ನೂ ಓದಿ:ಜೆಡಿಎಸ್ ಮೈತ್ರಿ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ: ಸಿಎಂ ಬೊಮ್ಮಾಯಿ

ಬಿಜೆಪಿಯವರೇ ಅಕ್ರಮವಾಗಿ ಮರಳು ಹೊಡೆಯುತ್ತಿದ್ದಾರೆ. ಆದರೆ ಬಿಜೆಪಿ ಕಾರ್ಯಕರ್ತರೇ ಗೃಹಸಚಿವರು, ಪೊಲೀಸರಾಗಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕೇಸು ದಾಖಲಿಸುವ ಕೆಲಸವನ್ನು ಆರಗ ಜ್ಞಾನೇಂದ್ರ‌ ಹಾಗೂ ಬಿಜೆಪಿ ಕಾರ್ಯಕರ್ತರು ಮಾಡುತ್ತಿದ್ದಾರೆ‌ ಎಂದು ಕಿಮ್ಮನೆ ರತ್ನಾಕರ್ ಕಿಡಿಕಾರಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next