Advertisement
ಪ್ರತಿಭಟನೆ ಹಿನ್ನೆಲೆಯಲ್ಲಿ ನಡೆದ ಸಂಧಾನ ಸಭೆಯಲ್ಲಿ ಆಡಳಿತ ಮಂಡಳಿಯು ಯಾವುದೇ ಕಾರಣಕ್ಕೂ ನೇಮಕಗೊಂಡ ಸಿಬ್ಬಂದಿಯನ್ನು ಕೈಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಹಿನ್ನೆಲೆಯಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ಸಂಘ ನಿರ್ಧರಿಸಿದೆ.
ಸ್ಪಂದಿಸದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಮತ್ತೆ ಹೋರಾಟ ಆರಂಭಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಡಾ.ಎ.ಸಿ.ವಿನೋದ್ ಕುಮಾರ್ ಹೇಳಿದರು. ಸೋಮವಾರ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಡಿ.ಎನ್.ಬೆಟ್ಟೇಗೌಡ, ಕಾರ್ಯದರ್ಶಿ ಪ್ರೊ.ನಾಗರಾಜ್, ಖಜಾಂಜಿ ಕಾಳೇಗೌಡ ಅವರೊಂದಿಗೆ ಸಭೆ ನಡೆಯಿತು. ಆಗ ಆಡಳಿತ ಮಂಡಳಿಯು ಯಾವುದೇ ಸಿಬ್ಬಂದಿಯನ್ನು ಕೈಬಿಡುವುದಿಲ್ಲ, ಆ ಬಗ್ಗೆ ಪ್ರಶ್ನಿಸುವ ಹಕ್ಕು ನೌಕರರ ಸಂಘಕ್ಕೆ ಇಲ್ಲ ಎಂದು ಹೇಳಿದ್ದಾರೆ. ಆ ಹಿನ್ನೆಲೆಯಲ್ಲಿ ಹೋರಾಟ ತೀವ್ರಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ರೋಗಿಗಳಿಗೆ ತೊಂದರೆಯಾಗಿಲ್ಲ: ಕಿಮ್ಸ್ ಆಸ್ಪತ್ರೆಗೆ ಬರುವ ಹೊರ ರೋಗಿಗಳ ಚಿಕಿತ್ಸೆಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಡಯಾಲಿಸಿಸ್ ಸೇವೆಯೂ ಎಂದಿನಂತೆ ನಡೆದಿದ್ದು, ಪೂರ್ವ ನಿಗದಿತ ಶಸ್ತ್ರಚಿಕಿತ್ಸೆಗಳನ್ನೂ ಮುಂದೂಡಿಲ್ಲ. 51 ಪ್ರಕರಣಗಳಲ್ಲಿ ತುರ್ತು ಚಿಕಿತ್ಸೆ ನೀಡಲಾಗಿದೆ. ಕಿರಿಯ ವೈದ್ಯರನ್ನು ಹೊಂದಿಸಿಕೊಂಡು ಮಂಗಳವಾರವೂ ಹೊರ ರೋಗಿಗಳಿಗೆ ಸೂಕ್ತ ಚಿಕಿತ್ಸಾ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕಿಮ್ಸ್ನ ಆಡಳಿತ ವೈದ್ಯಾಧಿಕಾರಿ ಡಾ.ಎಲ್. ಮಧುಶಂಕರ್ ಹೇಳಿದರು.