Advertisement

King Cobra: ಅಡುಗೆ ಕೋಣೆಯಲ್ಲಿ ಅವಿತು ಕುಳಿತ ದೈತ್ಯ ಕಾಳಿಂಗ ಸರ್ಪ, ಬೆಚ್ಚಿಬಿದ್ದ ಮನೆ ಮಂದಿ

01:06 PM May 25, 2024 | Team Udayavani |

ಚಿಕ್ಕಮಗಳೂರು: 12 ಅಡಿ ಉದ್ದದ ದೈತ್ಯ ಕಾಳಿಂಗ ಸರ್ಪವೊಂದು ಮನೆಯ ಅಡುಗೆ ಕೋಣೆಯೊಳಗೆ ಅವಿತು ಕುಳಿತ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನ‌ ಶೆಟ್ಟಿಕೊಪ್ಪ ಬಳಿ ನಡೆದಿದೆ.

Advertisement

ಎನ್.ಆರ್. ಪುರ ತಾಲೂಕಿನ‌ ಶೆಟ್ಟಿಕೊಪ್ಪದ ಮಂಜುನಾಥ್ ಗೌಡ ಅವರ ಮನೆಯ ಹಿಂಬಾಗಿಲನ್ನು ತೆರೆಯುತ್ತಿದ್ದಂತೆ ಏಕಾಏಕಿ ಹಾವು ಮನೆಯೊಳಗೆ ನುಗ್ಗಿದೆ, ಹಾವು ಮನೆಯೊಳಗೆ ಬರುತ್ತಿದ್ದಂತೆ ಮನೆಮಂದಿ ಭಯಭೀತರಾಗಿ ಮನೆಯಿಂದ ಹೊರ ಓಡಿ ಬಂದಿದ್ದಾರೆ.

ಕೂಡಲೇ ಸ್ನೇಕ್ ಹರೀಂದ್ರ ಅವರಿಗೆ ವಿಚಾರವನ್ನು ತಿಳಿಸಿದ್ದು ಸ್ಥಳಕ್ಕೆ ಬಂದ ಅವರು ಅಡುಗೆ ಕೊನೆಯಲ್ಲಿ ಅವಿತ್ತಿದ್ದ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಸೆರೆಹಿಡಿದು ಸುರಕ್ಷಿತ ತಾಣದಲ್ಲಿ ಬಿಟ್ಟಿದ್ದಾರೆ.

ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಮಳೆಯಿಂದ ಆಶ್ರಯ ಪಡೆಯಲು ಹಾವು ಮನೆಯೊಳಗೆ ಪ್ರವೇಶ ಮಾಡಿದೆ ಎನ್ನಲಾಗಿದೆ.

ಇದನ್ನೂ ಓದಿ: ನನ್ನ ಮಗ ಸತ್ತು ಹೋಗಿ 8 ವರ್ಷ ಆಗಿದೆ…; ಕುಮಾರಸ್ವಾಮಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

Advertisement
Advertisement

Udayavani is now on Telegram. Click here to join our channel and stay updated with the latest news.

Next