Advertisement

Kinnigoli: ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ,ಜೂನಿಯರ್‌ ಇಂಜಿನಿಯರ್‌ ಲೋಕಾಯಕ್ತ ಬಲೆಗೆ

08:15 PM Sep 19, 2024 | Team Udayavani |

ಕಿನ್ನಿಗೋಳಿ: ಕಿನ್ನಿಗೋಳಿ ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಹಾಗೂ ಜೂನಿಯರ್‌ ಇಂಜಿನಿಯರ್‌ ಕಾಮಗಾರಿಯೊಂದಕ್ಕೆ ಸಂಬಂಧಿಸಿ ಲಂಚ ಸ್ವೀಕರಿಸುವ ಸಂದರ್ಭ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಗುರುವಾರ (ಸೆ19) ಸಂಜೆ ನಡೆದಿದೆ.

Advertisement

ಪಿಡಬ್ಲ್ಯೂಡಿ ಕಾಸ್ಟ್‌-1 ಗುತ್ತಿಗೆದಾರರೊಬ್ಬರು 15ನೇ ಹಣಕಾಸು ಯೋಜನೆಯಲ್ಲಿ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ ವ್ಯಾಪ್ತಿಯ ಎಸ್‌ ಕೋಡಿ ಸರಕಾರಿ ಕೆರೆ ಅಭಿವೃದ್ಧಿಪಡಿಸುವ ಕಾಮಗಾರಿ ಗುತ್ತಿಗೆ ಕೆಲಸವನ್ನು ನಿರ್ವಹಿಸಿದ್ದು, ಕಾಮಗಾರಿಯ 9,77,154 ರೂ.ಮೊತ್ತದ ಬಿಲ್ ಮಂಜೂರಾತಿಯ ಬಗ್ಗೆ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಜೂನಿಯರ್ ಇಂಜಿನಿಯರ್‌ ನಾಗರಾಜು ಅವರಲ್ಲಿ ವಿಚಾರಿಸಿದಾಗ ಬಿಲ್ ಪಾಸ್‌ ಮಾಡಲು 37,000 ರೂ. ಲಂಚವನ್ನು ನೀಡುವಂತೆ ಮತ್ತು ಕಿನ್ನಿಗೊಳಿ ಪಟ್ಟಣ ಪಂಚಾಯತ್‌ನ ಮುಖ್ಯಾಧಿಕಾರಿಯವರಿಗೆ  15,000 ರೂ. ಲಂಚವನ್ನು ನೀಡಬೇಕೆಂದು ಬೇಡಿಕೆ ಇಟ್ಟಿದ್ದರು. ಜೂನಿಯರ್‌ ಇಂಜಿನಿಯರ್‌ ನಾಗರಾಜು ಮುಂಚಿತವಾಗಿ ರೂ 7000 ರೂ.  ಹಣವನ್ನು ಪಡೆದಿದ್ದರು.

ಗುರುವಾರ ಕಿನ್ನಿಗೊಳಿ ಪಟ್ಟಣ ಪಂಚಾಯತ್‌ನ ಜೂನಿಯರ್‌ ಇಂಜಿನಿಯರ್‌ ನಾಗರಾಜು 30,000 ರೂ. ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ 15,000 ರೂ. ಲಂಚದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಪೊಲೀಸ್‌ ಅಧೀಕ್ಷಕ ಎಂ.ಎ ನಟರಾಜ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್‌ ಠಾಣೆಯ ಪೊಲೀಸ್‌ ಉಪಾಧೀಕ್ಷಕರಾದ ಡಾ|ಗಾನ ಪಿ ಕುಮಾರ್‌, ಪೊಲೀಸ್‌ ನಿರೀಕ್ಷಕ ಅಮಾನುಲ್ಲಾ.ಎ, ಸುರೇಶ್‌ ಕುಮಾರ್‌ ಪಿ, ಚಂದ್ರಶೇಖರ್‌ ಕೆ.ಎನ್‌, ಚಂದ್ರಶೇಖರ್‌ ಸಿ.ಎಲ್‌ ಮತ್ತು ಸಿಬಂದಿ ಟ್ರ್ಯಾಪ್‌ ಕಾರ್ಯಾಚರಣೆ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next