Advertisement

ಕಿನ್ನಿಗೋಳಿ: ಬೈಕಿಗೆ ಬಸ್ಸು ಢಿಕ್ಕಿ, ಶಾಲಾ ಬಾಲಕ ಸಾವು

01:36 AM Jan 03, 2023 | Team Udayavani |

ಕಿನ್ನಿಗೋಳಿ : ದ್ವಿಚಕ್ರ ವಾಹನಕ್ಕೆ ಬಸ್ಸು ಢಿಕ್ಕಿ ಹೊಡೆದು ದ್ವಿಚಕ್ರ ವಾಹನದ ಹಿಂಬದಿ ಸವಾರ ಬಾಲಕ ಮೃತಪಟ್ಟ ಘಟನೆ ಕಟೀಲು ಸಮೀಪದ ಉಲ್ಲಂಜೆಯಲ್ಲಿ ನಡೆದಿದೆ.

Advertisement

ಉಲ್ಲಂಜೆ ಶಾಲಾ ಬಳಿಯ ನಿವಾಸಿ ಚರಣ್‌ (14) ಮೃತ ಬಾಲಕ. ಕಟೀಲು ಶಾಲೆಯಲ್ಲಿ 9ನೇ ತರಗತಿ ಕಲಿಯುತ್ತಿದ್ದ ಆತ ಸೋಮವಾರ ಸಂಜೆ ಶಾಲೆಯಿಂದ ಮನೆಗೆ ಬರುತ್ತಿದ್ದಾಗ ಕಟೀಲು ಗ್ರಾಮಕರಣಿಕರ ಕಚೇರಿ ಬಳಿ ಕಿನ್ನಿಗೋಳಿ ಕಡೆಗೆ ಸಂಚರಿಸುತ್ತಿದ್ದ ದ್ವಿಚಕ್ರ ವಾಹನವನ್ನು ನಿಲ್ಲಿಸಿ ಅದರಲ್ಲಿ ಉಲ್ಲಂಜೆ ಕಡೆಗೆ ಸಂಚರಿಸುತ್ತಿರುವಾಗ ಉಲ್ಲಂಜೆ ಜುಮಾದಿ ಗುಡ್ಡೆಯ ಬಳಿ ಮುಂಭಾಗದಲ್ಲಿ ಕಿನ್ನಿಗೋಳಿಯಿಂದ ಕಟೀಲು ಕಡೆಗೆ ಬರುತ್ತಿದ್ದ ಬಸ್ಸು ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾಗಿದೆ.

ಪರಿಣಾಮ ದ್ವಿಚಕ್ರ ವಾಹನದ ಹಿಂಬದಿ ಕುಳಿತಿದ್ದ ಚರಣ್‌ ರಸ್ತೆಗೆ ಎಸೆಯಲ್ಪಟ್ಟು ಬಸ್ಸಿನಡಿಗೆ ಬಿದ್ದು ಮೃತಪಟ್ಟಿದ್ದಾನೆ. ಸವಾರ ಎಡ ಬದಿ ಬದಿಗೆ ಎಸೆಯಲ್ಪಟ್ಟ ಕಾರಣ ಬದುಕುಳಿದಿದ್ದಾರೆ. ಇಲ್ಲಿ ಸುಮಾರು ಒಂದು ಗಂಟೆ ಸಂಚಾರದಲ್ಲಿ ವ್ಯತ್ಯಯವಾಗಿದೆ.

ಬಾಲಕ ತಂದೆ, ತಾಯಿ, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾನೆ. ಮೃತ ಬಾಲಕನ ತಂದೆ ಗಣೇಶ್‌ ಕಿನ್ನಿಗೋಳಿಯ ಮಿಲ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದಾರೆ.
ಮೂಲ್ಕಿ ಸರಕಾರಿ ಅಸ್ಪತ್ರೆಯಲ್ಲಿ ಬಾಲಕನ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಆಸ್ಪತ್ರೆಗೆ ಶಾಸಕ ಉಮಾನಾಥ ಕೋಟ್ಯಾನ್‌ ಮತ್ತಿತರರು ಭೇಟಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next