Advertisement

ಕಾಂಗ್ರೆಸ್ ಸೇರ್ಪಡೆಯಾದ ಕಿರಣ್ ಕುಮಾರ್ ಮತ್ತು ಸಂದೇಶ್ ನಾಗರಾಜ್

12:10 PM Feb 20, 2023 | Team Udayavani |

ಬೆಂಗಳೂರು: ತುಮಕೂರಿನ ಮಾಜಿ ಶಾಸಕ, ಬಿಜೆಪಿಯ ಕಿರಣ್ ಕುಮಾರ್ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯ, ಜೆಡಿಎಸ್ ಮುಖಂಡ ಮೈಸೂರಿನ ಸಂದೇಶ್ ನಾಗರಾಜ್ ಅವರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

Advertisement

ಇದೇ ವೇಳೆ ತುಮಕೂರು ಗ್ರಾಮೀಣ ಕ್ಷೇತ್ರದ ಮಾಜಿ ಶಾಸಕರಾದ ಹೆಚ್. ನಿಂಗಪ್ಪ, ಮಾಜಿ ಜಿ.ಪಂ ಸದಸ್ಯರಾದ ಸುಬ್ರಹ್ಮಣ್ಯ ಕೂಡಾ ಕಾಂಗ್ರೆಸ್ ಸೇರ್ಪಡೆಯಾದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಮಾಜಿ ಡಿಸಿಎಂ ಡಾ ಜಿ ಪರಮೇಶ್ವರ, ಕೇಂದ್ರದ ಮಾಜಿ ಸಚಿವ ಕೆಎಚ್ ಮುನಿಯಪ್ಪ, ಮಾಜಿ ಸಚಿವರಾದ ಟಿಬಿ ಜಯಚಂದ್ರ, ಮಾಜಿ ಶಾಸಕ ಕೆಎನ್ ರಾಜಣ್ಣ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next