Advertisement

Kannada Cinema; ಚಿತ್ರೀಕರಣ ಮುಗಿಸಿದ ಕಿರಣ್ ರಾಜ್ ನಟನೆಯ ‘ರಾನಿ’

02:59 PM Dec 24, 2023 | Team Udayavani |

ಗುರುತೇಜ್‌ ಶೆಟ್ಟಿ ನಿರ್ದೇಶನದ, ಕಿರಣ್‌ ರಾಜ್‌ ನಾಯಕನಾಗಿ ನಟಿಸಿರುವ “ರಾನಿ’ ಚಿತ್ರದ ಕೊನೆ ಹಂತದ ಚಿತ್ರಿಕರಣ ಮುಗಿಸಿದೆ. ಮೈಸೂರಿನ ವಿಷ್ಣುವರ್ಧನ್‌ ಸ್ಮಾರಕದಲ್ಲಿ ರವಿಶಂಕರ್‌, ಮಠ ಗುರುಪ್ರಸಾದ್‌, ಯಶ್‌ ಶೆಟ್ಟಿ, ಸೂರ್ಯ ಕುಂದಾಪುರ, ಧರ್ಮಣ್ಣ ಕಡೂರ್‌ ಅವರ ಕೊನೆಯ ಹತ್ತು ದಿನದ ಚಿತ್ರೀಕರಣ ಮಾಡಿ ಮುಗಿಸಿದೆ. ಚಂದ್ರಕಾಂತ್‌ ಪೂಜಾರಿ, ಉಮೇಶ ಹೆಗ್ಡೆ ನಿರ್ಮಿಸುತ್ತಿರುವ ಮೊದಲ ಚಿತ್ರ ಇದಾಗಿದೆ

Advertisement

ಈಗಾಗಲೇ ಪೊಸ್ಟರ್‌, ಟೀಸರ್‌ ಬಿಡುಗಡೆಯಾಗಿ ಮೆಚ್ಚುಗೆ ವ್ಯಕ್ತವಾಗಿದೆ. ಚಿತ್ರದಲ್ಲಿ ಮೂವರು ನಾಯಕಿಯರಿದ್ದು ರಾಧ್ಯ, ಸಮೀಕ್ಷಾ ಮತ್ತು ಅಪೂರ್ವ ಅಭಿನಯಿಸಿದ್ದಾರೆ. ಮೈಕೋ ನಾಗರಾಜ್, ಉಗ್ರಂ ಮಂಜು, ಉಗ್ರಂ ರವಿ, ಸುಜಯ್‌ ಶಾಸ್ತ್ರಿ, ಗಿರೀಶ್‌ ಹೆಗ್ಡೆ, ಬಿ ಸುರೇಶ, ಶ್ರೀಧರ್‌, ಧರ್ಮೇಂದ್ರ ಆರಸ್‌, ಚೇತನ್‌ ದುರ್ಗ, ಅನಿಲ್‌ ಯಾದವ್‌, ಪ್ರಥ್ವಿ ರಾಜ್‌, ಅರ್ಜುನ್‌, ಕರಿ ಸುಬ್ಬು ಮುಂತಾದ ಹೆಸರಾಂತ ಕಲಾವಿದ ಚಿತ್ರದಲ್ಲಿ ಅಭಿನಯಿಸಿದ್ದಾರೆ.

ರಾಘವೇಂದ್ರ ಬಿ ಕೋಲಾರ ಛಾಯಾಗ್ರಹಣ, ಸತೀಶ್‌ ಕಲಾ ನಿರ್ದೇಶನ, ಉಮೇಶ ಸಂಕಲನ, ಮಣಿಕಾಂತ್‌ ಕದ್ರಿ ಸಂಗೀತ ಹಾಗೂ ಪ್ರಮೋದ ಮರವಂತೆ ಗೀತರಚನೆ, ವಿನೋದ್‌ ಸಾಹಸ ಧನಂಜಯ ಅವರ ನೃತ್ಯ ನಿರ್ದೇಶನವಿದೆ. ರಾನಿಗೆ ಸಚಿನ್‌ ಬಸ್ರೂರ್‌ ಹಿನ್ನಲೆ ಸಂಗೀತವಿದ್ದು ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸ ನಡೆಯುತ್ತಿದೆ

Advertisement

Udayavani is now on Telegram. Click here to join our channel and stay updated with the latest news.

Next