Advertisement

ಕಿರಿಕೊಡ್ಲಿ ಮಠ: ಕೆರೆಯಾದ ರಸ್ತೆ

08:36 PM Jul 29, 2019 | Sriram |

ಮಡಿಕೇರಿ : ಕೊಡ್ಲಿಪೇಟೆ ಸಮೀಪದ ಊರುಗುತ್ತಿ ಗ್ರಾಮಕ್ಕೆ ತೆರಳುವ ರಸ್ತೆ ಕಿರಿಕೊಡ್ಲಿ ಮಠ ಶಾಲೆಯ ಮುಂಭಾಗದಲ್ಲಿ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆಗಳ ಹೊಂಡಗಳಲ್ಲಿ ತುಂಬಿಕೊಂಡಿರುವುದರಿಂದ ಸಂಚಾರಕ್ಕೆ ಅಡಚಣೆಯಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸುವಂತೆ ಗ್ರಾಮಸ್ಥರು ಹಾಗೂ ಸಾರ್ವನಿಕರು ಒತ್ತಾಯಿಸಿದ್ದಾರೆ.

Advertisement

ಊರುಗುತ್ತಿ ಗ್ರಾಮಕ್ಕೆ ತೆರಳುವ ರಸ್ತೆಗಳ ಗುಂಡಿಗಳಲ್ಲಿ ಮಳೆ ನೀರು ನಿಂತು ಸಂಪೂರ್ಣ ಕೆಸರುಮಯವಾಗಿದ್ದು, ಶಾಲಾ ಮಕ್ಕಳು, ವಾಹನಗಳ ಸವಾರರು ಹಾಗೂ ಸಾರ್ವಜನಿಕರಿಗೆ ನಡೆದಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾವಾಗಿದೆ. ಇದರಿಂದ ಸಾರ್ವಜನಿಕರು ಹಿಡಿ ಶಾಪ ಹಾಕುತ್ತಲೇ ಸಂಚರಿಸುವ ಪರಿಸ್ಥಿತಿ ಎದುರಾಗಿದೆ. ಈ ರಸ್ತೆಯಲ್ಲಿ ಶಾಲಾ, ಕಾಲೇಜು ದೇವಸ್ಥಾನ, ಚರ್ಚ್‌ಗಳಿರುವುದರಿಂದ ಈ ಮಾರ್ಗವಾಗಿ ದಿನಂಪ್ರತಿ ಸಾವಿರಾರು ಮಂದಿ ನಡೆದಾಡುತ್ತಿದ್ದು, ವಾಹನಗಳ ಸಂಚಾರವು ಹೆಚ್ಚಾಗಿದೆ. ಈ ಗ್ರಾಮ ಪ್ರಸ್ತುತ ದಿನಗಳಲ್ಲಿ ಅಭಿವೃದ್ಧಿಯನ್ನು ಹೊಂದುತ್ತಿರುವ ಶಾಲಾ ಕಾಲೇಜಿಗೆ ಮಕ್ಕಳು ನಡೆದು ಬರುವ‌ವರು. ರಸ್ತೆ ಸಂಪೂರ್ಣ ಗುಂಡಿಯಿಂದ ಕೂಡಿದ್ದು, ಮಳೆ ಬಂದಾಗ ನೀರು ನಿಂತು ನಡೆದಾಡಲು ಅಸಾಧ್ಯವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next