Advertisement

ಕಿರಿಮಂಜೇಶ್ವರ: ಮಲಗಿದಲ್ಲೇ ವ್ಯಕ್ತಿ ಸಾವು

12:08 AM Dec 06, 2022 | Team Udayavani |

ಉಪ್ಪುಂದ: ಬೆಳಗ್ಗೆ ಮಲಗಿದ್ದ ವ್ಯಕ್ತಿ ಮೃತಪಟ್ಟ ಘಟನೆ ಕಿರಿಮಂಜೇಶ್ವರದಲ್ಲಿ ಡಿ. 4ರಂದು ಸಂಭವಿಸಿದೆ. ಕಿರಿಮಂಜೇಶ್ವರ ಗ್ರಾಮದ ಕೊಡೇರಿ ಗಂಗೈಬೈಲು ಬಾಡಿ ಮನೆ ಚಂದ್ರ ಮೊಗವೀರ (39) ಮೃತಪಟ್ಟ ವ್ಯಕ್ತಿ.

Advertisement

ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಚಂದ್ರ ಮೊಗವೀರ ಅವರು ಮದ್ಯಪಾನ ಮಾಡುವ ಅಭ್ಯಾಸವನ್ನು ಹೊಂದಿದ್ದು ಬೋಟಿಗೆ ರಜೆ ಇದ್ದ ಕಾರಣ ಡಿ. 4 ರಂದು ಬೆಳಗ್ಗೆ ಮನೆಯಲ್ಲಿ ಮದ್ಯಪಾನ ಸೇವಿಸಿ ಮಲಗಿದ್ದು ಮನೆಯವರು ಮಧ್ಯಾಹ್ನ ಊಟದ ಸಮಯದಲ್ಲಿ ಎಬ್ಬಿಸಲು ಹೊದಾಗ ಏಳದೇ ಇದ್ದಾಗ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದರು.

ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next