Advertisement
ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ವಿಧಾನಸೌಧಕ್ಕೆ ಆಗಮಿಸಿದ ಯಡಿಯೂರಪ್ಪ, ಮೂರನೇ ಮಹಡಿಯಲ್ಲಿರುವ ಕಚೇರಿಯಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ಸಚಿವ ಸಂಪುಟ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿ, ರಾಜ್ಯದಲ್ಲಿ ತೀವ್ರ ಬರ ತಲೆದೋರಿದ್ದು, ರೈತ ಸಮುದಾಯ ಸಂಕಷ್ಟದಲ್ಲಿದ್ದು, ಅವರಿಗೆ ಸ್ಪಂದಿಸುವುದು ನನ್ನ ಮೊದಲ ಆದ್ಯತೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ ಸರ್ಕಾರವು ಸಣ್ಣ ಹಿಡುವಳಿದಾರರಿಗೆ ವಾರ್ಷಿಕ 6,000 ರೂ. ಸಹಾಯಧನ ನೀಡುತ್ತಿದೆ. ಆ ಯೋಜನೆ ಯಡಿ ರಾಜ್ಯ ಸರ್ಕಾರದ ವತಿಯಿಂದ ತಲಾ 2000 ರೂ.ನಂತೆ 2 ಕಂತಿನಲ್ಲಿ ಒಟ್ಟು 4000 ರೂ. ಸಹಾಯಧನವನ್ನು ರಾಜ್ಯ ಸರ್ಕಾರದಿಂದ ನೀಡಲಾಗುವುದು ಎಂದು ಪ್ರಕಟಿಸಿದರು.
Related Articles
ಅಗತ್ಯಬಿದ್ದರೆ ದೆಹಲಿಗೆ
ಸಂಪುಟ ರಚನೆ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಅಗತ್ಯ ಬಿದ್ದರೆ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗಿ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿದರು.
ಜುಲೈ ತಿಂಗಳ ಕಾಮಗಾರಿ ಟೆಂಡರ್,
ವರ್ಗಾವಣೆ ಪ್ರಸ್ತಾಪ ತಡೆಗೆ ಸೂಚನೆ
ವರ್ಗಾವಣೆ ಪ್ರಸ್ತಾಪ ತಡೆಗೆ ಸೂಚನೆ
ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯಪಾಲರಿಂದ ಮುಖ್ಯಮಂತ್ರಿಯಾಗಿ ನಿಯೋಜಿತರಾಗುತ್ತಿದ್ದಂತೆ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಜುಲೈ ತಿಂಗಳಲ್ಲಿ ಅನುಮೋದನೆಗೊಂಡಿರುವ ಎಲ್ಲ ಹೊಸ ಕಾಮಗಾರಿಗಳಿಗೆ ಸಂಬಂಧಿಸಿದ ಆದೇಶಗಳನ್ನು ತಕ್ಷಣವೇ ತಡೆ ಹಿಡಿಯುವಂತೆ ಸೂಚನೆ ನೀಡಿದ್ದಾರೆ. ಮುಂದಿನ ಪರಿಶೀಲನೆ ಆಗುವವರೆಗೆ ತಡೆ ಹಿಡಿಯುವಂತೆ ಸರ್ಕಾರದ ಎಲ್ಲ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿ/ಪ್ರಧಾನ ಕಾಯದರ್ಶಿ/ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲು ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರಿಗೆ ಸೂಚಿಸಿದ್ದಾರೆ. ಈ ಕುರಿತು ಟಿ.ಎಂ.ವಿಜಯಭಾಸ್ಕರ್ ಅವರು, ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ಪತ್ರ ಸಹ ಬರೆದಿದ್ದಾರೆ. ಜುಲೈ ತಿಂಗಳಿನಲ್ಲಿ ಆಗಿರುವ ವರ್ಗಾವಣೆಗೆ ಸಂಬಂಧಿಸಿದ ಪ್ರಸ್ತಾವನೆಗಳ ಮೇಲೆ ಅನುಮೋದನೆಗೊಂಡು ಜಾರಿಯಾಗದೇ ಇರುವ ಆದೇಶಗಳನ್ನು ಮುಂದಿನ ಆದೇಶದವರೆಗೆ ಜಾರಿ ಮಾಡದಂತೆ ಹಾಗೂ ಈಗಾಗಲೇ ಹೊರಡಿಸಿರುವ ಆದರೆ, ಚಾಲನೆಗೊಳ್ಳದಿರುವ ವರ್ಗಾವಣೆ ಸಂಬಂಧಿತ ಪ್ರಸ್ತಾವಗಳ ಮೆಲಿನ ಆದೇಶಗಳನ್ನು ಮುಂದಿನ ಆದೇಶದವರೆಗೆ ಚಾಲನೆಗೊಳಿಸದಂತೆ ಸರ್ಕಾರದ ಎಲ್ಲ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿ/ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದ್ದಾರೆ. ನಿಯೋಜಿತ ಮುಖ್ಯಮಂತ್ರಿಯವರ ನಿರ್ದೇಶನ ಪಾಲಿಸುವಂತೆ ವಿಜಯಭಾಸ್ಕರ್ ಪತ್ರದ ಮೂಲಕ ಕೋರಿದ್ದಾರೆ
Advertisement