Advertisement

ರಾಜ್ಯದಲ್ಲಿ ಸಾಧನೆ ಮಾಡಿರುವ ಸಾಧಕಿಯರಿಗೆ ಕಿತ್ತೂರು ಚೆನ್ನಮ್ಮ ಪ್ರಶಸ್ತಿ: ಜೊಲ್ಲೆ

11:02 PM Mar 09, 2021 | Team Udayavani |

ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ರಾಜ್ಯದಲ್ಲಿ ಸಾಧನೆ ಮಾಡಿರುವ 49 ಮಹಿಳೆಯರು ಮತ್ತು ಸಂಘ ಸಂಸ್ಥೆಗಳಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

Advertisement

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಸಾಧನೆ ಮಾಡಿರುವ ಮಹಿಳೆಯರು, ಮಹಿಳಾ ಪರವಾಗಿ ಕೆಲಸ ಮಾಡಿರುವ ಸ್ವಯಂ ಸೇವಾ ಸಂಸ್ಥೆಗಳು ಮಕ್ಕಳಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಮಹಿಳೆಯರ ಬಗ್ಗೆ ಸೇವೆ ಸಲ್ಲಿಸಿದ 6 ಸಂಸ್ಥೆಗಳು, 8 ವ್ಯಕ್ತಿಗಳು, ಕಲೆ 5, ಸಾಹಿತ್ಯ 3, ಕ್ರೀಡೆ 2, ಶಿಕ್ಷಣ 1, ವೀರಮಹಿಳೆ 1 ಹಾಗೂ 10 ಅತ್ಯುತ್ತಮ ಸ್ತ್ರೀ ಶಕ್ತಿಗುಂಪುಗಳಿಗೆ ಪ್ರಶಸ್ತಿ ನೀಡಲಾಗುವುದು ಎಂದರು.

ಮಕ್ಕಳ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ 4 ಸಂಸ್ಥೆ, ನಾಲ್ವರು ವ್ಯಕ್ತಿಗಳು ಹಾಗೂ ಸಾಹಸ ಪ್ರದರ್ಶಿಸಿದ ಮಕ್ಕಳಿಗೆ 3 ಮಕ್ಕಳಿಗೆ ಹೊಯ್ಸಳ ಹಾಗೂ ಕೆಳದಿ ಚೆನ್ನಮ್ಮ ಪ್ರಶಸ್ತಿ ಮತ್ತು 2 ಮಕ್ಕಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ನೀಡಿ ಗೌರವಿಸಲಾಗುವುದು. ಈ ಎಲ್ಲ ಪ್ರಶಸ್ತಿಗಳಿಗೆ 10 ಸಾವಿರದಿಂದ 1 ಲಕ್ಷದವರೆಗೆ ನಗದು ಬಹುಮಾನ ನೀಡಲಾಗುತ್ತಿದೆ ಎಂದರು.

ಇದನ್ನೂ ಓದಿ :ನಕಲಿ ಸಿಡಿ ಕಾರ್ಯಾಚರಣೆ ಹಿಂದೆ ದೊಡ್ಡದೊಡ್ಡ ಕೈಗಳಿದೆ ; ವಿಜಯೇಂದ್ರ

ವಿಶೇಷ ಪ್ರಶಸ್ತಿ:
ಈ ಪ್ರಶಸ್ತಿ ಹೊರತುಪಡಿಸಿ ಮಹಿಳಾ ಮತ್ತು ಮಕ್ಕಳ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಮೂವರಿಗೆ (ಕೋಲಾರದ ಗೌತಮ್‌, ಹಾವೇರಿಯ ಶೋಭಾ, ಬೆಳಗಾವಿಯ ಸುಗಂಧಾ) ವಿಶೇಷ ಬಹುಮಾನ ನೀಡಲಾಗುತ್ತಿದೆ ಎಂದರು.

Advertisement

ಉಸ್ತುವಾರಿಗೆ ಸಿದ್ಧ
ರಮೇಶ್‌ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದರಿಂದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸ್ಥಾನ ಖಾಲಿ ಇದೆ. ಜಿಲ್ಲಾ ಉಸ್ತುವಾರಿಯ ಜವಾಬ್ದಾರಿ ವಹಿಸಿದರೆ ನಿಭಾಯಿಸುವ ಸಾಮರ್ಥ್ಯ ಇದೆ ಎಂದು ಶಶಿಕಲಾ ಜೊಲ್ಲೆ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next