Advertisement

KMC Manipal; ಖ್ಯಾತ ಸಂತಾನೋತ್ಪತ್ತಿ ತಜ್ಞ ಡಾ. ಪ್ರತಾಪ್ ಪೂರ್ಣ ಸಮಯದ ಸಮಾಲೋಚನೆಗೆ ಲಭ್ಯ

06:45 PM Jun 03, 2024 | Team Udayavani |

ಮಣಿಪಾಲ: ಖ್ಯಾತ ಸಂತಾನೋತ್ಪತ್ತಿ ಔಷಧಿ ತಜ್ಞ ಮತ್ತು ಶಸ್ತ್ರಚಿಕಿತ್ಸಕ ಡಾ. ಪ್ರತಾಪ್ ಕುಮಾರ್ ಎನ್, ಈಗ ಪೂರ್ಣಕಾಲಿಕವು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ, ಡಾ ರಾಮದಾಸ್ ಪೈ ಬ್ಲಾಕ್‌ನಲ್ಲಿ ಸಮಾಲೋಚನೆಗಾಗಿ ಲಭ್ಯವಿರುತ್ತಾರೆ.

Advertisement

ಜೂನ್ 3 ರಿಂದ ಜಾರಿಗೆ ಬರುವಂತೆ ಅವರು ಡಾ. ರಾಮದಾಸ್ ಪೈ ಬ್ಲಾಕ್‌ನಲ್ಲಿ ಪೂರ್ವ ನಿಗದಿ (appointment) ಮೂಲಕ ತಮ್ಮ ಸೇವೆಗಳನ್ನು ನೀಡಲಿದ್ದಾರೆ.

ತಮ್ಮ ಅಸಾಧಾರಣ ಪರಿಣತಿ ಮತ್ತು ಆರೈಕೆಗಾಗಿ ಗುರುತಿಸಲ್ಪಟ್ಟಿರುವ ಡಾ. ಪ್ರತಾಪ್ ಕುಮಾರ್ ಅವರು ಟೆಸ್ಟ್ ಟ್ಯೂಬ್ ಬೇಬಿ (ಐವಿಎಫ್) ಕಾರ್ಯ ವಿಧಾನಗಳಲ್ಲಿ ತಮ್ಮ ವಿಶೇಷ ಕೌಶಲ್ಯಗಳ ಮೂಲಕ 10,000 ಕ್ಕೂ ಹೆಚ್ಚು ಶಿಶುಗಳ ಜನನವನ್ನು ಸುಗಮಗೊಳಿಸಿರುವ ದಾಖಲೆ ಹೊಂದಿದ್ದಾರೆ.

ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಅವರು ಡಾ. ಪ್ರತಾಪ್ ಕುಮಾರ್ ಅವರ ಪೂರ್ಣ ಸಮಯದ ಲಭ್ಯತೆಯ ಬಗ್ಗೆ ತಮ್ಮ ಉತ್ಸಾಹವನ್ನು ವ್ಯಕ್ತಪಡಿಸಿದರು. “ಡಾ. ಪ್ರತಾಪ್ ಅವರು ಪ್ರಖ್ಯಾತ ಸಂತಾನೋತ್ಪತ್ತಿ ಔಷಧಿ ಮತ್ತು ಶಸ್ತ್ರಚಿಕಿತ್ಸಕರಾಗಿದ್ದಾರೆ, ಅವರ ಪರಿಣತಿಯು ಮಕ್ಕಳನ್ನು ಬಯಸುವ ಅಸಂಖ್ಯಾತ ದಂಪತಿಗಳಿಗೆ ನಗುವನ್ನು ತಂದಿದೆ. ಅವರು ಈಗ ಕಸ್ತೂರ್ಬಾ ಆಸ್ಪತ್ರೆಯ ಡಾ. ರಾಮದಾಸ್ ಪೈ ಬ್ಲಾಕ್ ಸಂಪೂರ್ಣವಾಗಿ ಲಭ್ಯವಿದ್ದಾರೆ ಎಂದು ಹೇಳಿದ್ದಾರೆ”.

ಸೋಮವಾರದಿಂದ ಶುಕ್ರವಾರದವರೆಗೆ, ಬೆಳಗ್ಗೆ 9ರಿಂದ ಮಧ್ಯಾಹ್ನ 12ರವರೆಗೆ ಮತ್ತು ಮಧ್ಯಾಹ್ನ 3ರಿಂದ 4 ಗಂಟೆಯವರೆಗೆ ಪೂರ್ವ ನಿಗದಿ (appointment) ಮೂಲಕ ಡಾ. ಪ್ರತಾಪ್ ಕುಮಾರ್ ಸಮಾಲೋಚನೆಗಳಿಗೆ ಲಭ್ಯವಿರುತ್ತಾರೆ.

Advertisement

ಸಮಯ ನಿಗದಿಪಡಿಸಲು ಅಥವಾ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:

ದೂರವಾಣಿ: 6364469750

ವೆಬ್‌ಸೈಟ್: www.khmanipal.com

Advertisement

Udayavani is now on Telegram. Click here to join our channel and stay updated with the latest news.

Next