Advertisement

KMC Manipal ; ವಿಶ್ವ ಹೃದಯ ದಿನ: ಹೃದಯ ಆರೋಗ್ಯ ಜಾಗೃತಿ ಕಲಾ ಶಿಲ್ಪ ಅನಾವರಣ

08:04 PM Sep 29, 2023 | Team Udayavani |

ಮಣಿಪಾಲ:ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಸೆ. 29ರಂದು ನಡೆದ ಸರಳ ಸಮಾರಂಭದಲ್ಲಿ ಮಾಹೆ ಮಣಿಪಾಲದ ಬೋಧನಾ ಆಸ್ಪತ್ರೆಗಳ ಮುಖ್ಯ ನಿರ್ವಹಣಾಧಿಕಾರಿ ಡಾ ಆನಂದ್ ವೇಣುಗೋಪಾಲ್ ಮತ್ತು ವೈದ್ಯಕೀಯ ಅಧೀಕ್ಷಕ ಡಾ ಅವಿನಾಶ್ ಶೆಟ್ಟಿ ಜಂಟಿಯಾಗಿ ಹೃದಯ ಆರೋಗ್ಯ ಜಾಗೃತಿ ಕಲಾ ಶಿಲ್ಪ ಅನಾವರಣಗೊಳಿಸಿದರು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಅವಿನಾಶ ಶೆಟ್ಟಿ ಅವರು, ಹೃದಯ ಆರೋಗ್ಯ ಕಾಪಾಡುವಲ್ಲಿ ಸಮತೋಲಿತ ಆಹಾರ ಮತ್ತು ನಿತ್ಯ ವ್ಯಾಯಾಮದ ಮಹತ್ವವನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ.ಪದ್ಮಕುಮಾರ್ , ಹೃದ್ರೋಗ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಗಣೇಶ್ ಕಾಮತ್, ಡಾ ಗುರುಪ್ರಸಾದ್ ರೈ , ಡಾ ಕೀರ್ತಿನಾಥ ಬಲ್ಲಾಳ, , ಸಚಿನ್ ಕಾರಂತ್ ಮತ್ತು ಮೋಹನ್ ಶೆಟ್ಟಿ ಉಪಸ್ಥಿತರಿದ್ದರು . ಶ್ರೀನಾಥ್ ಮಣಿಪಾಲ ಮತ್ತು ರವಿ ಹಿರೇಬೆಟ್ಟು ಪರಿಸರ ಸ್ನೇಹಿ ವಸ್ತುಗಳಿಂದ ಶಿಲ್ಪವನ್ನು ತಯಾರಿಸಿದ್ದರು. ಕೃಷ್ಣಪ್ರಸಾದ್ ಕಾರ್ಯಕ್ರಮ ನಿರ್ವಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next