Advertisement

KMC: ಎನ್‌ಎಬಿಎಚ್‌ ಮರುಪ್ರಮಾಣೀಕರಣ

01:44 AM Nov 06, 2023 | Team Udayavani |

ಮಣಿಪಾಲ: ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ಆರೋಗ್ಯ ಸೇವಾ ಪೂರೈಕೆದಾರರ ರಾಷ್ಟ್ರೀಯ ಮಾನ್ಯತಾ ಮಂಡಳಿ, ಕ್ವಾಲಿಟಿ ಕೌನ್ಸಿಲ್‌ ಆಫ್ ಇಂಡಿಯಾದಿಂದ ನರ್ಸಿಂಗ್‌ ಶ್ರೇಷ್ಠತೆಗೆ ಮರು ಪ್ರಮಾಣೀಕರಣ ಪಡೆದಿದೆ.

Advertisement

ಶನಿವಾರ ಜರಗಿದ ಕಾರ್ಯ ಕ್ರಮದಲ್ಲಿ ಮಾಹೆ ಸಹಕುಲಾಧಿಪತಿ ಪತಿ ಡಾ| ಎಚ್‌.ಎಸ್‌. ಬಲ್ಲಾಳ್‌, ಕುಲಪತಿ ಲೆ| ಜ| ಡಾ| ಎಂ.ಡಿ. ವೆಂಕಟೇಶ್‌ ಮಾತನಾಡಿ, ರೋಗಿಗಳ ಚಿಕಿತ್ಸೆ ಮತ್ತು ಆರೈಕೆಯಲ್ಲಿ ಶುಶ್ರೂಷಾ ಸೇವೆ ಬಹು ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಮಣಿಪಾಲದ ಆಸ್ಪತ್ರೆಯ ಆರೋಗ್ಯ ಮತ್ತು ಶುಶ್ರೂಷೆ ಸೇವೆಗಳಲ್ಲಿ ಉತ್ಕೃಷ್ಟತೆಯನ್ನು ಮುಂದುವರಿ
ಸಿದೆ ಎಂದರು. ಆಸ್ಪತ್ರೆ ಮಣಿಪಾಲದ ನರ್ಸಿಂಗ್‌ ಸೇವೆಗಳ ಮುಖ್ಯಸ್ಥೆ ಡಾ| ಶುಭ ಸೂರಿಯ ಮತ್ತು ನರ್ಸಿಂಗ್‌ ತಂಡಕ್ಕೆ ಪ್ರಮಾಣಪತ್ರ ಹಸ್ತಾಂತರಿಸಿದರು.

ಸಹ ಕುಲಪತಿ ಡಾ| ಶರತ್‌ ಕುಮಾರ್‌ ರಾವ್‌, ಕೆಎಂಸಿ ಡೀನ್‌ ಡಾ| ಪದ್ಮರಾಜ್‌ ಹೆಗ್ಡೆ, ಮಾಹೆ ಮಣಿಪಾಲದ ಬೋಧನಾ ಆಸ್ಪತ್ರೆಗಳ ಮುಖ್ಯ ನಿರ್ವಹಣಾಧಿಕಾರಿ ಡಾ| ಆನಂದ್‌ ವೇಣುಗೋಪಾಲ್‌, ವೈದ್ಯಕೀಯ ಅಧೀಕ್ಷಕ ಡಾ| ಅವಿನಾಶ್‌ ಶೆಟ್ಟಿ, ಗುಣಮಟ್ಟ ಅನುಷ್ಠಾನದ ಸಲಹೆ ಗಾರ ಡಾ| ಸುನೀಲ್‌ ಸಿ. ಮುಂಡ್ಕೂರ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next