Advertisement
ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸಿದ ಅವರು, ಹಾಸನದಲ್ಲಿ ಹಾಲಿನ ಉತ್ಪಾದನೆ ಹೆಚ್ಚಳವಾಗಿದ್ದರಿಂದ ಮೆಗಾ ಡೇರಿ ಸ್ಥಾಪಿಸುವ ಪ್ರಸ್ತಾಪ ಬಂದಿತ್ತು. ಅದನ್ನು ಬಜೆಟ್ನಲ್ಲಿ ಘೋಷಣೆ ಮಾಡಿದ್ದೇನೆ. ಇದರಿಂದ ಚಿಕ್ಕಮಗಳೂರಿಗೂ ಅನುಕೂಲವಾಗಲಿದೆ ಎಂದು ಹೇಳಿದರು. ಈ ವೇಳೆ ಮಧ್ಯ ಪ್ರವೇಶಿಸಿದ ಬಿಜೆಪಿಯ ಸಿ.ಟಿ. ರವಿ, ಹಾಲು ಉತ್ಪಾದಿಸುವ ರೈತರು ಎಲ್ಲರೂ ಒಂದೇ ಆದರೆ, ಹಾಲಿನ ದರ ಮಂಗಳೂರಿನಲ್ಲಿ ಪ್ರತಿ ಲೀಟರ್ಗೆ 28 ರೂ. ನೀಡದರೆ ರಾಮನಗರದಲ್ಲಿ 21 ರೂ.ನೀಡಲಾಗುತ್ತಿದೆ. ಇದರಿಂದ ರೈತರಿಗೆ ತಾರತಮ್ಯ ಮಾಡಿದಂತಾಗುತ್ತದೆ. ಎಲ್ಲ ರೈತರಿಗೂ ಏಕ ರೂಪದ ಹಾಲಿನ ದರ ನಿಗದಿ ಪಡಿಸಬೇಕು ಎಂದರು.
ಇದಕ್ಕೆ ಸ್ಪಂದಿಸಿದ ಸಿಎಂ ಕೋಲಾರದಲ್ಲಿ ಮೆಗಾ ಡೇರಿ ತೆರೆಯುವ ಕುರಿತು ಶೀಘ್ರವೇ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.