Advertisement

ಬುದ್ಧಿ ಹೇಳಿದ ವ್ಯಕ್ತಿಗೆ ಚಾಕು ಇರಿತ

12:14 PM Oct 21, 2018 | Team Udayavani |

ಬೆಂಗಳೂರು: ಸಾವಾಗಿರುವ ಮನೆಮುಂದೆ ಜಗಳ ಮಾಡಬೇಡಿ ಎಂದು ಬುದ್ಧಿವಾದ ಹೇಳಿದ ವ್ಯಕ್ತಿಗೆ ಚಾಕುವಿನಿಂದ ಇರಿದು ಮೂವರು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಮುನಿರೆಡ್ಡಿ ಪಾಳ್ಯದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

Advertisement

ದುಷ್ಕರ್ಮಿಗಳಿಂದ ಚಾಕು ಇರಿತಕ್ಕೊಳಗಾದ ಸಂಜಯ್‌ (47) ಎಬುವವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು, ಪ್ರಮುಖ ಆರೋಪಿ ಆಕಾಶ್‌ ಸೇರಿ ಮತ್ತಿತರ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ.

ಗಾಯಾಳು ಸಂಜಯ್‌ ಅವರ ಸಂಬಂಧಿ ವೃದ್ಧೆಯೊಬ್ಬರು ಮೃತಪಟ್ಟಿದ್ದು ರಾತ್ರಿ ಅವರ ಮನೆಯ ಬಳಿ ಸಂಬಂಧಿಕರೆಲ್ಲರೂ ಇದ್ದರು. ಈ ವೇಳೆ ಆಕಾಶ್‌ ಸೇರಿ ಇನ್ನಿತರ ಹುಡುಗರು ಕ್ಷುಲ್ಲಕ ಕಾರಣಕ್ಕೆ ರಸ್ತೆಯಲ್ಲಿ ಜಗಳವಾಡುತ್ತಿದ್ದರು. ಹೀಗಾಗಿ ಸಂಜಯ್‌, ಸಾವಿನ ಮನೆ ಮುಂದೆ ಗಲಾಟೆ ಮಾಡಬೇಡಿ ಎಂದು ಬುದ್ಧಿವಾದ ಹೇಳಿದ್ದಾರೆ.

ಇಷ್ಟಕ್ಕೆ ಆಕ್ರೋಶಗೊಂಡ ಆಕಾಶ್‌ ಸೇರಿ ಮೂವರು ದುಷ್ಕರ್ಮಿಗಳು, ಸಂಜಯ್‌ ಅವರ ಹೊಟ್ಟೆಭಾಗಕ್ಕೆ ಇರಿದಿದ್ದಾರೆ. ಅವರ ರಕ್ಷಣೆಗೆ ಬಂದ ನವೀನ್‌ ಎಂಬುವವರ ಮೇಲೂ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಕೂಡಲೇ ಸ್ಥಳೀಯರು ಸಂಜಯ್‌ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು  ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next