Advertisement

Kochi-Mangaluru ವಂದೇ ಭಾರತ್‌ ರೈಲು: ರೈಲ್ವೇ ಸಚಿವರಿಗೆ ಸಂಸದ ನಳಿನ್‌ ಕುಮಾರ್‌ ಮನವಿ

11:54 PM Dec 27, 2023 | Team Udayavani |

ಮಂಗಳೂರು: ತಿರುವನಂತಪುರ- ಕಾಸರಗೋಡು ನಡುವೆ ಓಡುತ್ತಿರುವ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲನ್ನು ಮಂಗಳೂರು ತನಕ ವಿಸ್ತರಿಸುವಂತೆ ಹಾಗೂ ಮಂಗಳೂರಿನಿಂದ ಕೊಚ್ಚಿಗೆ ಇನ್ನೊಂದು ಹೊಸ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸೇವೆಯನ್ನು ನೀಡುವಂತೆ ದಕ್ಷಿಣ ಕನ್ನಡ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರು ಕೇಂದ್ರ ರೈಲ್ವೇ ಸಚಿವ ಅಶ್ವಿ‌ನಿ ವೈಷ್ಣವ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ.

Advertisement

ಮಂಗಳೂರು ನಗರವು ಕರ್ನಾಟಕದ ದಕ್ಷಿಣ ಭಾಗದ ಒಂದು ಪ್ರಮುಖ ಬಂದರು ಮತ್ತು ವಾಣಿಜ್ಯ ನಗರವಾಗಿದ್ದು, ವಂದೇ ಭಾರತ್‌ ಎಕ್ಸ್‌ಪ್ರೆಸ್‌ ಸೇವೆಯನ್ನು ಮಂಗಳೂರಿಗೆ ವಿಸ್ತರಿಸುವುದರಿಂದ ಕೇರಳ ಮತ್ತು ಕರ್ನಾಟಕದ ನಡುವಿನ ಆರ್ಥಿಕ ಚಟುವಟಿಕೆಗಳಿಗೆ, ಪ್ರವಾಸೊದ್ಯಮಕ್ಕೆ ಅನುಕೂಲವಾಗಲಿದೆ.

ಸುಖಕರ ಪ್ರಯಾಣ ಹಾಗೂ ಅತೀ ವೇಗಕ್ಕೆ ಹೆಸರಾಗಿರುವ ವಂದೇ ಭಾರತ್‌ ಎಕ್ಸ್‌ ಪ್ರಸ್‌ ರೈಲಿನಿಂದ ಪ್ರಯಾಣ ಅವಧಿ ಕಡಿಮೆಯಾಗಲಿದೆ. ಆದ್ದರಿಂದ ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

 

 

Advertisement
Advertisement

Udayavani is now on Telegram. Click here to join our channel and stay updated with the latest news.

Next