Advertisement

ಕೊಡಗು ಜಿ.ಪಂ.ಪ್ರಭಾರ ಎಇ ಅಮಾನತ್ತಿಗೆ ಆದೇಶ

11:01 PM Nov 06, 2019 | Team Udayavani |

ಬೆಂಗಳೂರು: 21 ಕೋಟಿ ರೂ.ಎನ್‌ಡಿಆರ್‌ಎಫ್ ನಿಧಿಯನ್ನು ಆರ್ಥಿಕ ಇಲಾಖೆ ನಿಯಮ ಉಲ್ಲಂ ಸಿ ಬೇರೆ ಬ್ಯಾಂಕ್‌ನಲ್ಲಿ ಠೇವಣಿ ಇಟ್ಟ ದೂರು ಬಂದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಪಂಚಾಯತ್‌ನ ಪ್ರಭಾರ ಕಾರ್ಯಪಾಲಕ ಎಂಜಿನಿಯರ್‌ ಮತ್ತು ಲೆಕ್ಕಾಧೀಕ್ಷಕರನ್ನು ಅಮಾನತು ಮಾಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಕೆ.ಎಸ್‌.ಈಶ್ವರಪ್ಪ ಆದೇಶ ನೀಡಿದ್ದಾರೆ.

Advertisement

ಈ ಕುರಿತು ಅವರು ಪತ್ರಿಕಾ ಪ್ರಕಟಣೆ ಹೊರಡಿಸಿ, ಕೊಡಗು ಜಿಲ್ಲಾ ಪಂಚಾಯತಿಗೆ ಜಿಲ್ಲಾಧಿಕಾರಿಯವರ ಮುಖಾಂತರ ಅನುದಾನ ಬಿಡುಗಡೆಯಾಗಿತ್ತು. ಆರ್ಥಿಕ ಇಲಾಖೆಯ ಮಾರ್ಗಸೂಚಿಗಳನ್ನು ಉಲ್ಲಂ ಸಿ 21 ಕೋಟಿ ರೂಪಾಯಿಗಳ ಎನ್‌ಡಿಆರ್‌ಎಫ್ಗೆ ಸಂಬಂಧಿಸಿದ ಹಣವನ್ನು ಖಾಸಗಿ ಬ್ಯಾಂಕ್‌ನಲ್ಲಿ ಹೊಸದಾಗಿ ಖಾತೆ ತೆರೆದು ಅವರು ಠೇವಣಿ ಇಟ್ಟ ಬಗ್ಗೆ ದೂರು ಬಂದಿದೆ. ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತನಿಖೆ ನಡೆಸಿ, ವರದಿ ಸಲ್ಲಿಸಿದ್ದಾರೆ.

ಈ ವರದಿಯಲ್ಲಿ ಪ್ರಭಾರ ಕಾರ್ಯಪಾಲಕ ಎಂಜಿನಿಯರ್‌, ಲೆಕ್ಕಅಧೀಕ್ಷಕ ಅವರು ಗಂಭೀರ ಸ್ವರೂಪದ ಕರ್ತವ್ಯ ಲೋಪ, ದುರ್ನಡತೆ ಎಸಗಿದ್ದು ಕಂಡು ಬಂದಿದೆ. ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಇವರಿಂದ ಇಲಾಖೆಗೆ ಗಂಭೀರ ಸ್ವರೂಪದ ಆರ್ಥಿಕ ಲೋಪವಾಗಿರುವುದರಿಂದ ಸರ್ಕಾರಿ ಅಧಿಕಾರಿಯನ್ನು ಇಲಾಖಾ ವಿಚಾರಣೆ ಬಾಕಿ ಇಟ್ಟು, ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತುಗೊಳಿಸಲು ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಗೆ ಆದೇಶಿಸಿರುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next