Advertisement

ರಸ್ತೆ ಅಪಘಾತ : ಕೃಷಿ ಉಪಕರಣಗಳ ಸಂಶೋಧಕ ಕೋಡಿಬೈಲು ಸತ್ಯನಾರಾಯಣ ಸ್ಥಳದಲ್ಲೇ ಸಾವು

11:22 AM May 17, 2021 | Team Udayavani |

ಪುತ್ತೂರು : ಲಾರಿ ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ, ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆಯ ಪುತ್ತೂರಿನ ತೆಂಕಿಲದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ.

Advertisement

ಬೆಳ್ಳಾರೆಯ ಕೋಡಿಬೈಲು ಸತ್ಯನಾರಾಯಣ ಮೃತ ವ್ಯಕ್ತಿ. ಇವರು ಉದ್ಯಮಿ, ಕೃಷಿ ಉಪಕರಣಗಳ ಸಂಶೋಧಕರಾಗಿ,ಧಾರ್ಮಿಕ ಸಂಘಟಕರಾಗಿದ್ದರು.

ಇದನ್ನೂ ಓದಿ : ಕಾಪು: ಟಗ್ ನಲ್ಲಿ ಸಿಲುಕಿದ್ದ ಎಲ್ಲಾ ಕಾರ್ಮಿಕರ ರಕ್ಷಣೆ; ನೌಕಾದಳದಿಂದ ಯಶಸ್ವಿ ಏರ್ ಲಿಫ್ಟ್

ಸವಾರ ಬೆಳ್ಳಾರೆಯಿಂದ ಪುತ್ತೂರು ಬೈಪಾಸ್ ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯಾದ ರಭಸಕ್ಕೆ ಸತ್ಯನಾರಾಯಣರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ದೇಹವನ್ನು ಪುತ್ತೂರು ಸರಕಾರಿ ಅಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಬೆಳ್ಳಾರೆ ಪರಿಸರದಲ್ಲಿ ಚಿರಪರಿಚಿತರಾಗಿದ್ದ ಸತ್ಯನಾರಾಯಣ ಕೋಡಿಬೈಲುರವರು ಕೋಡಿಬೈಲು ಕೃಷಿ ಏಜೆನ್ಸೀಸ್ ಮಾಲಕರಾಗಿ ಅನೇಕ ಕೃಷಿ ಉಪಕರಣಗಳ ಸಂಶೋಧಕರಾಗಿ ಹೆಸರು ಮಾಡಿದ್ದರು. ವಿಶ್ವ ಹಿಂದೂ ಪರಿಷತ್ ಮುಖಂಡರಾಗಿ ಸೇವೆ ಸಲ್ಲಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next