Advertisement

ಕೋದಂಡರಾಮ ಸ್ವಾಮಿ ಬ್ರಹ್ಮರಥೋತ್ಸವ

12:00 PM Mar 02, 2018 | Team Udayavani |

ಮಹದೇವಪುರ: ಬೆಂಗಳೂರು ಪೂರ್ವ ತಾಲೂಕಿನ ಕಾಡುಗುಡಿಯ ಶ್ರೀ ಕೋದಂಡರಾಮ ಸ್ವಾಮಿ ಬ್ರಹ್ಮರಥೋತ್ಸವ ಗುರುವಾರ ವಿಜೃಂಭಣೆಯಿಂದ ನಡೆಯಿತು.

Advertisement

ರಥೋತ್ಸವದ ಅಂಗವಾಗಿ ದೇವರಿಗೆ ವಿಶೇಷ ಅಲಂಕಾರ, ಪೂಜೆ ಸೇರಿ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದವು. ಜತೆಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ರಥೋತ್ಸವ ನಡೆಯಿತು. ದೇವಾಲಯದ ಧರ್ಮದರ್ಶಿ ಕೆ.ಎನ್‌.ಅಶ್ವತ್ಥನಾರಾಯಣ ರೆಡ್ಡಿ ರಥೋತ್ಸವಕ್ಕೆ ಚಾಲನೆ ನೀಡಿದರು.

ವೈಟ್‌ಪೀಲ್‌ª ನಾಗೊಂಡನಹಳ್ಳಿ, ಚನ್ನಸಂದ್ರ, ಕಾಡುಗುಡಿ, ದಿನ್ನೂರು, ಬೆಳತ್ತೂರು, ಸೀಗೆಹಳ್ಳಿ, ಇಮ್ಮಡಿಹಳ್ಳಿ, ಓಪಾರಂ ಸೇರಿದಂತೆ ಸುತ್ತಮುತ್ತಲಿನ ಸಾವಿರಾರು ಭಕ್ತರು, ಶಾಸಕ ಅರವಿಂದ ಲಿಂಬಾವಳಿ, ಪಾಲಿಕೆ ಸದಸ್ಯ ಎಸ್‌.ಮುನಿಸ್ವಾಮಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರಿನಿವಾಸ್‌, ಜಿ.ಪಂ ಸದಸ್ಯೆ ವೇದಶ್ರೀ ಲಕ್ಷ್ಮೀನಾರಾಯಣ ಇತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next