Advertisement

ಸಮಾಜಮುಖೀ ಕೆಲಸಗಳು ಸ್ತುತ್ಯರ್ಹ: ಡಾ|ಎಚ್‌.ಎಸ್‌. ಬಲ್ಲಾಳ್‌

11:10 PM Dec 06, 2018 | Karthik A |

ಉಡುಪಿ: ಆರ್ಥಿಕ ಅಶಕ್ತತೆಯಿಂದ ಬಳಲುತ್ತಿರುವ ರೋಗಿಗಳಿಗೆ, ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವರ್ಷಂಪ್ರತಿ ಆರ್ಥಿಕ ಸಹಾಯವನ್ನು ಒದಗಿಸುವ ಮೂಲಕ ಕೊಡೆತ್ತೂರು ಉಡುಪ ಫ್ಯಾಮಿಲಿ ಫೌಂಡೇಶನ್‌ ಟ್ರಸ್ಟ್ ಮಾದರಿ ಕಾರ್ಯಗಳನ್ನು ನಿರ್ವಹಿಸುತ್ತಾ ಬರುತ್ತಿದೆ ಎಂದು ಮಣಿಪಾಲ ಅಕಾಡೆಮಿ ಆಫ್ ಹೈಯರ್‌ ಎಜುಕೇಶನ್‌ನ ಅಧ್ಯಕ್ಷ‌ ಡಾ| ಎಚ್‌.ಎಸ್‌. ಬಲ್ಲಾಳ್‌ ಅವರು ಹೇಳಿದರು. ಕೊಡೆತ್ತೂರು ಉಡುಪ ಫ್ಯಾಮಿಲಿ ಫೌಂಡೇಶನ್‌ ಟ್ರಸ್ಟ್ ಆಶ್ರಯದಲ್ಲಿ ನಡೆದ ಮೂರು ದಿನಗಳ ಸ್ಮಾರಕ ದತ್ತಿನಿಧಿ ಉಪನ್ಯಾಸದಲ್ಲಿ ಅಂತಿಮ ದಿನದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

Advertisement

ಪ್ರಥಮ ದಿನದ ಉಪನ್ಯಾಸದಲ್ಲಿ  ದೇಶೀ ತಂತ್ರಜ್ಞಾನ ಮತ್ತು ಆವಿಷ್ಕಾರಗಳು  ಎಂಬ ವಿಷಯದ ಮೇಲೆ ಮುಂಬಯಿ ಐಐಟಿಬಿಯ ಮೊನಾಷ್‌ ರೀಸರ್ಚ್‌ ಸಿ.ಇ.ಒ. ಡಾ| ಮುರಳಿ ಶಾಸ್ತ್ರಿ ಅವರು ಉಪನ್ಯಾಸ ನೀಡಿ ದೇಶೀಯ ತಂತ್ರಜ್ಞಾನಗಳ ಆವಿಷ್ಕಾರಗಳ ಸಂಖ್ಯೆ ಹೆಚ್ಚಾಗಬೇಕು ಮತ್ತು ನಮ್ಮ ಯುವ ತಂತ್ರಜ್ಞರು ಈ ನಿಟ್ಟಿನಲ್ಲಿ ಯೋಚಿಸಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಣಿಪಾಲ ಅಕಾಡೆಮಿ ಆಫ್ ಹೈಯರ್‌ ಎಜುಕೇಷನ್‌ ಇದರ ರಿಜಿಸ್ಟಾರ್‌ ಡಾ| ನಾರಾಯಣ ಸಭಾತ್‌ ಅವರು ವಹಿಸಿದ್ದರು.


ಎರಡನೇ ದಿನದ ಉಪನ್ಯಾಸವನ್ನು ನೀಡಿದ ನ್ಯಾಯವಾದಿ ಎ.ಎಸ್‌.ಎನ್‌. ಹೆಬ್ಟಾರ್‌ ಅವರು ಕರಾವಳಿ ಕರ್ನಾಟಕದಲ್ಲಿ ಪ್ರಕಟನಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ತೇಜಕ ಎಂಬ ವಿಷಯದ ಕುರಿತಾಗಿ ಮಾತನಾಡಿ ಕಳೆದ ಹಲವಾರು ದಶಕಗಳಿಂದ ಕರಾವಳಿಯಲ್ಲಿ ಆಗಿರುವ ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಅದರಲ್ಲಿ ಆಗಿರುವ ಪಲ್ಲಟಗಳ ಕುರಿತಾಗಿ ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಜನರಲ್‌ ಎಜುಕೇಷನ್‌ ಆಫ್ ಮಣಿಪಾಲ ಇದರ ಆಡಳಿತಾಧಿಕಾರಿ ಡಾ| ಎಚ್‌. ಶಾಂತಾರಾಮ್‌ ಅವರು ವಹಿಸಿದ್ದರು.

ಮೂರನೇ ಮತ್ತು ಅಂತಿಮ ದಿನದ ದತ್ತಿನಿಧಿ ಉಪನ್ಯಾಸವನ್ನು  ಸಮುದಾಯ ಸೇವೆಗಳಿಗೆ ಆರೋಗ್ಯ ಸೇವೆಗಳು ಎಂಬ ವಿಷಯದ ಮೇಲೆ  ಮಣಿಪಾಲ ಅಕಾಡೆಮಿ ಆಫ್ ಹೈಯರ್‌ ಎಜುಕೇಷನ್‌ ಇದರ ಉಪ ಕುಲಪತಿ ಡಾ| ಎಚ್‌. ವಿನೋದ್‌ ಭಟ್‌ ನೀಡಿದರು. ಅಧ್ಯಕ್ಷತೆಯನ್ನು ಮಣಿಪಾಲ ಅಕಾಡೆಮಿ ಆಫ್ ಹೈಯರ್‌ ಎಜುಕೇಷನ್‌ ಇದರ ಪ್ರೊ| ಚಾನ್ಸ್‌ಲರ್‌ ಡಾ| ಹೆಚ್‌.ಎಸ್‌. ಬಲ್ಲಾಳ್‌ ಅವರು ವಹಿಸಿದ್ದರು.

ಟ್ರಸ್ಟ್ ನ ಸಂಚಾಲಕರಾಗಿರುವ ಡಾ. ನಯನಾಭಿರಾಮ ಉಡುಪ ಅವರು ಟ್ರಸ್ಟ್ ನ ಧ್ಯೇಯೋದ್ದೇಶಗಳನ್ನು ವಿವರಿಸಿದರು. ಕಾರ್ಯದರ್ಶಿ ಹಾಗೂ ಯುಗಪುರುಷ ಪತ್ರಿಕೆಯ ಸಂಪಾದಕ ಕೆ. ಭುವನಾಭಿರಾಮ ಉಡುಪ ಅವರು ಉಪಸ್ಥಿತರಿದ್ದರು.



Advertisement
Advertisement

Udayavani is now on Telegram. Click here to join our channel and stay updated with the latest news.

Next