Advertisement

ರಾಜ್ಯ ರಾಜಕೀಯದ ಕುರಿತು ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು

03:23 PM Jan 13, 2023 | Team Udayavani |

ಹೊಸಪೇಟೆ: ಒಲೆ ಹೊತ್ತಿ ಉರಿದರೆ ನಿಲ್ಲಬಹುದು, ಧರೆ ಹೊತ್ತಿ ಉರಿದರೆ ನಿಲ್ಲದು ಎಂದು ಕೋಡಿಮಠದ ಪೀಠಾಧ್ಯಕ್ಷ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಮಾರ್ಮಿಕವಾಗಿ ಭವಿಷ್ಯ ನುಡಿದಿದ್ದಾರೆ.

Advertisement

ವಿಜಯನಗರ ಜಿಲ್ಲೆ ಹೊಸಪೇಟೆಯ ಬಿಜೆಪಿ ನಾಯಕಿ ರಾಣಿ‌ ಸಂಯುಕ್ತ ಅವರ ನಿವಾಸಕ್ಕೆ‌ ಶುಕ್ರವಾರ ಭೇಟಿ ನೀಡಿ‌ದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, 2023 ಕ್ಕೆ ಜಾಗತಿಕ ಮಟ್ಟದಲ್ಲಿ ಸಮಸ್ಯೆ ಎದುರಾಗಲಿದೆ. ಜಾಗತಿಕವಾಗಿ ಬಹಳ ದೊಡ್ಡ ಸಮಸ್ಯೆ ಕಾಡುತ್ತದೆ. ಸಾಧು ಸಂತರಿಗೆ ಸಮಸ್ಯೆಯಾಗಲಿದೆ.ರಾಜ್ಯದಲ್ಲಿ ಒಂದು ಪಕ್ಷ ಮಾತ್ರ ಅಧಿಕಾರಕ್ಕೆ ಬರಲಿದೆ ಎಂದ ಶ್ರೀಗಳು, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರ‌‌‌‌ ಮಾಡುವುದಿಲ್ಲ ಎಂದರು.

ಎರಡ್ಮೂರು ದೊಡ್ಡ- ದೊಡ್ಡ ತಲೆಗಳು ಉರುಳುತ್ತವೆ. ಕೊರೊನಾ ನಾಲ್ಕನೆ‌ ಅಲೆಯಿಂದ‌ ಯಾವುದೇ ಸಮಸ್ಯೆಯಾಗುವುದಿಲ್ಲ. ಸಂಕ್ರಾಂತಿ- ಯುಗಾದಿಯ ಬಳಿಕ ಮತ್ತೆ ಮಳೆಯಾಗಲಿದೆ. ಕಳೆದ ಬಾರಿ ಹೇಗೆ, ಆಯಿತು ಹಾಗೆ ಆಗುತ್ತದೆ. ಸಂಕ್ರಾಂತಿಗೆ ಇನ್ನೂ ಎರಡು ದಿನಗಳಿವೆ, ಸಂಕ್ರಾಂತಿ ಭವಿಷ್ಯ, ಯುಗಾದಿ ಭವಿಷ್ಯ ಆ ಕಾಲಕ್ಕೆ ಹೇಳಬೇಕಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next