Advertisement
ಈ ಸಂದರ್ಭದಲ್ಲಿ ಕೋಡಿಯ ಹಾಜಿ ಕೆ. ಮೊದಿನ್ ಬ್ಯಾರಿಸ್ ಅನುದಾನಿತ ಪ್ರೌಢಶಾಲೆ ಹಾಗೂ ಶ್ರೀ ರಾಮ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳು ಈ ಬೀಚ್ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾದುದು ವಿಶೇಷವಾಗಿತ್ತು.
ಪುರಸಭಾಧ್ಯಕ್ಷೆ ವಸಂತಿ ಮೋಹನ ಸಾರಂಗ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಈ ಪರಿಸರ, ಬೀಚ್ ಸ್ವಚ್ಛಗೊಳಿಸುವುದರಿಂದ ಉತ್ತಮ ಆರೋಗ್ಯವನ್ನು ಹೊಂದಬಹುದು. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಎಲ್ಲರ ಕರ್ತವ್ಯ. ಈ ಬಗ್ಗೆ ಮಕ್ಕಳು ಮನೆಯವರಿಗೆ, ನೆರೆ-ಹೊರೆಯವರಿಗೆ ಅರಿವು ಮೂಡಿಸಬೇಕು ಎಂದರು.
Related Articles
Advertisement
ಪುರಸಭೆಯ ಮುಖ್ಯಾಧಿಕಾರಿ ವಾಣಿ ಬಿ. ಆಳ್ವ, ಉಪಾಧ್ಯಕ್ಷ ರಾಜೇಶ್ ಕಾವೇರಿ, ಸದಸ್ಯರಾದ ಗುಣರತ್ನ, ಪುಷ್ಪಾ ಶೇಟ್, ಜ್ಯೋತಿ, ಕೋಡಿಯ ಹಾಜಿ ಕೆ. ಮೊದಿನ್ ಬ್ಯಾರಿಸ್ ಅನುದಾನಿತ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಜಯಂತಿ, ಶ್ರೀ ರಾಮ ವಿದ್ಯಾ ಕೇಂದ್ರದ ಶಿಕ್ಷಕರು, ಪುರಸಭೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ಕೋಡಿಯ ನಿರ್ಲಕ್ಷ್ಯ: ಸ್ಥಳೀಯರ ಆಕ್ರೋಶಕೋಡಿಯ ನಿವಾಸಿಗರು, ಸ್ವತ್ಛತಾ ಕಾರ್ಯಕ್ರಮಕ್ಕೆ ಕೋಡಿ ಬೀಚ್ಗೆ ಆಗಮಿಸಿದ ಪುರಸಭೆಯ ಸದಸ್ಯರು, ಅಧಿಕಾರಿಗಳ ಕಾರ್ಯವೈಖರಿ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದರು. ಇಲ್ಲಿ ನೀರು ಹೋಗಲು ಸರಿಯಾದ ಚರಂಡಿ ವ್ಯವಸ್ಥೆಯಿಲ್ಲ. ಸರಿಯಾದ ರಿಕ್ಷಾ ನಿಲ್ದಾಣವಿಲ್ಲ.ಕೇವಲ ಒಂದು ದಿನ ಬಂದು ಸ್ವಚ್ಛತೆ ಮಾಡಿ ಹೋಗುತ್ತೀರಾ. ಮತ್ತೆ ಈ ಕಡೆ ಬರುವುದೇ ಇಲ್ಲ. ಕೋಡಿ ಭಾಗವನ್ನು ಪುರಸಭೆ ಸಂಪೂರ್ಣ ನಿರ್ಲಕ್ಷಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.