Advertisement

ರಾಜಕಾರಣದ ಬಗ್ಗೆ ಪ್ರಸ್ತಾಪ ಮಾಡಿಲ್ಲ : ಕೋಡಿಮಠ ಶ್ರೀ

08:23 PM Sep 12, 2021 | Team Udayavani |

ಅರಸೀಕೆರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಂಗಳೂರಿನಲ್ಲಿ ನಡೆಯುತ್ತಿದ್ದ ವಿವಾಹ ಕಾರ್ಯಕ್ರಮದಲ್ಲಿ ತಮ್ಮನ್ನು ಭೇಟಿ ಮಾಡಿ ಆಶೀರ್ವಾದ ಪಡೆ‌ದರೇ ಹೊರತು, ರಾಜಕಾರಣದ ಬಗ್ಗೆ ಯಾವುದೇ ವಿಷಯ ಪ್ರಸ್ತಾಪ ಮಾಡಿಲ್ಲ ಎಂದು ಹಾರನಹಳ್ಳಿ ಸುಕ್ಷೇತ್ರ ಕೋಡಿಮಠದ ಪೀಠಾಧ್ಯಕ್ಷ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದರು.

Advertisement

ತಾಲೂಕಿನ ಹಾರನಹಳ್ಳಿ ಸುಕ್ಷೇತ್ರ ಕೋಡಿಮಠದಲ್ಲಿ ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿ, ಬೆಂಗಳೂರಿನ ವಿವಾಹ ಕಾರ್ಯಕ್ರಮಕ್ಕೆ ತಾವು ಹೋದಾಗ ಅಲ್ಲಿಗೆ ಸಿದ್ದರಾಮಯ್ಯನವರು ಬಂದಿದ್ದರು, ಕೋವಿಡ್ ಸಂಕಷ್ಟ ಪರಿಸ್ಥಿತಿ ಹಾಗೂ ಇತರೆ ವಿಷಯಗಳ ಬಗ್ಗೆ ಕೆಲವು ನಿಮಿಷ ವಿಚಾರ ಮಂಥನ ನಡೆದು ನಂತರ ಆಶೀರ್ವಾದ ಪಡೆದರು ಎಂದರು.

ಇದನ್ನೂ ಓದಿ:ಸರ್ಕಾರಕ್ಕೆ ಸಾರ್ವಜನಿಕರ ಸಹಕಾರವೂ ಅಗತ್ಯ : ಸಚಿವ ಶಿವರಾಮ ಹೆಬ್ಬಾರ

ಈ ಸಂದರ್ಭದಲ್ಲಿ ರಾಜ್ಯ ರಾಜಕಾರಣ ಸೇರಿದಂತೆ ಅತ್ಯಂತ ಸೂಕ್ಷ್ಮ ವಿಷಯಗಳನ್ನು ಯಾರೂ ಪ್ರಸ್ತಾಪ ಮಾಡಿಲ್ಲ. ರಾಜಕಾರಣದಲ್ಲಿ ಧರ್ಮ ಇರಬೇಕೇ ಹೊರತು ಧರ್ಮದಲ್ಲಿ ರಾಜಕಾರಣ ಬೇರೆಸುವುದು ಸರಿಯಲ್ಲ ಎಂದರಲ್ಲದೆ, ಒಳ್ಳೆಯ ಕೆಲಸ ಕಾರ್ಯಗಳು ಅಥವಾ ಸಮಸ್ಯೆಗಳ ಪರಿಹಾರದ ಬಗ್ಗೆ ಸೂಕ್ತ ಮಾರ್ಗದರ್ಶನ ಪಡೆಯುವುದು ಅನಾದಿಕಾಲದ ರಾಜ ವಂಶದ ಆಡಳಿತದಲ್ಲಿ ಬೆಳೆದು ಬಂದಿರುವ ಗುರು ಪರಂಪರೆಯ ಸಂಪ್ರದಾಯವಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next