Advertisement

ವಿಶೇಷ ವರದಿ: ಕೊಡಿಯಾಲ್‌ಗ‌ುತ್ತು ಕ್ರಾಸ್‌: ಸಮಸ್ಯೆ ತಪ್ಪಿದ್ದಲ್ಲ

10:03 AM May 25, 2020 | mahesh |

ಮಂಗಳೂರು: ಮಂಗಳೂರು ನಗರದ ಜೈಲು ರಸ್ತೆಯಿಂದ ಬಿಜೈಗೆ ಸಂಪರ್ಕ ಕಲ್ಪಿಸುವ ಕೊಡಿಯಾಲ್‌ಗ‌ುತ್ತು ಕ್ರಾಸ್‌ ರಸ್ತೆ ಅಕ್ಕ-ಪಕ್ಕದಲ್ಲೇ ಕಳೆದ ಒಂದು ವರ್ಷಗಳಿಂದ ನಾಲ್ಕು ಬಾರಿ ಕಾಮಗಾರಿಯ ನೆಪದಲ್ಲಿ ಅಗೆಯಲಾಗಿದೆ. ಜತೆಗೆ ಸಮಸ್ಯೆಗಳು ಪುನರಾವರ್ತನೆಯಾಗುತ್ತಲೇ ಇವೆ.

Advertisement

ಸ್ಥಳೀಯರಿಗೆ ಕಿರಿಕಿರಿ
ಲಕ್ಷಾಂತರ ರೂಪಾಯಿ ಸಾರ್ವಜನಿಕರ ತೆರಿಗೆ ಹಣ ಖರ್ಚು ಮಾಡುವುದರೊಂದಿಗೆ ರಸ್ತೆಯಲ್ಲಿ ಸಾಗುವ ಸ್ಥಳೀಯರಿಗೆ, ವಾಹನ ಸವಾರರಿಗೆ ಅಡ್ಡಿಯುಂಟಾಗುತ್ತಿದೆ. ಈ ಜಾಗದಲ್ಲಿ ಆಗುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಹುಡುಕುವ ಪ್ರಯತ್ನವನ್ನು ಪಾಲಿಕೆ ಮಾಡಿಲ್ಲ ಎನ್ನುವುದು ಆರೋಪ.

ಕೃತಕ ನೆರೆ
ಜೋರಾಗಿ ಮಳೆ ಬಂದರೆ ಈ ಪ್ರದೇಶದ ಸುತ್ತಮುತ್ತಲಿನ ಮನೆಗೆ ಕೃತಕ ನೆರೆ ಉಂಟಾಗುತ್ತದೆ. ಮಳೆ ನೀರು ಹರಿಯುವ ಚರಂಡಿ ವ್ಯವಸ್ಥೆ ಸಮರ್ಪಕವಾಗಿರದ ಕಾರಣ, ಮಳೆ ನೀರು ರಾಜಕಾಲುವೆಯನ್ನು ಸೇರುತ್ತಿಲ್ಲ. ಬದಲಾಗಿ ರಸ್ತೆಯಲ್ಲಿಯೇ ಹರಿದು ಅಕ್ಕ-ಪಕ್ಕದ ಫ್ಲಾಟ್‌, ಮನೆಗಳಿಗೆ ನುಗ್ಗುತ್ತಿದೆ. ಕಳೆದ ವರ್ಷ ಕೂಡ ಇದೇ ರೀತಿಯ ಸಮಸ್ಯೆ ಉಂಟಾಗಿ ರಸ್ತೆ ಅಗೆದು ಕಾಮಗಾರಿ ನಡೆಸಲಾಗಿತ್ತು. ಇದೀಗ ಶನಿವಾರದಿಂದ ಮತ್ತೂಮ್ಮೆ ರಸ್ತೆ ಅಗೆಯುವ ಕೆಲಸದಲ್ಲಿ ಪಾಲಿಕೆ ತೊಡಗಿಸಿಕೊಂಡಿದೆ.

ಹಲವು ಬಾರಿ ಕೆಲಸ
ಈ ರಸ್ತೆಯಲ್ಲಿ ಹಾದು ಹೋಗುವ ನೀರಿನ ಪೈಪ್‌ಲೈನ್‌ ಕೆಲ ತಿಂಗಳ ಹಿಂದೆ ಕೆಟ್ಟಿತ್ತು. ಇದೇ ಕಾಮಗಾರಿಗೆ ಡ್ರಿಲ್ಲಿಂಗ್‌ ಮಷೀನ್‌ ಮುಖೇನ ರಸ್ತೆ ಅಗೆಯಲಾಗಿತ್ತು. ಈ ಕಾಮಗಾರಿ ನಡೆಯುತ್ತಿರುವ ಕೂಗಳತೆ ದೂರದಲ್ಲಿ ಒಳಚರಂಡಿ ಕಾಮಗಾರಿಗೆಂದು ಸುಮಾರು 5 ಅಡಿಯಷ್ಟು ಆಳ ರಸ್ತೆ ಅಗೆಯಲಾಗಿತ್ತು. ಭಾರೀ ಮಳೆಯಿಂದಾಗಿ ಈ ಭಾಗದ ಒಳಚರಂಡಿ ಪೈಪ್‌ಲೈನ್‌ನ ಹತ್ತು ಅಡಿ ಆಳದಲ್ಲಿ ದೊಡ್ಡ ಗಾತ್ರದ ಕಲ್ಲು ಸಿಲುಕಿ ಹಾಕಿಕೊಂಡಿದ್ದರಿಂದ ನೀರು ಹರಿಯುವುದಕ್ಕೆ ಸಾಧ್ಯವಾಗುತ್ತಿರಲಿಲ್ಲ. ಸುಮಾರು ಎರಡು ವಾರಗಳ ಬಳಿಕ ಕಾಮಗಾರಿ ಪೂರ್ಣಗೊಂಡಿತ್ತು.

ಈ ಕಾಮಗಾರಿ ಪೂರ್ಣಗೊಂಡ ಕೆಲವು ದಿನಗಳಲ್ಲೇ ಒಳಚರಂಡಿ ನೀರು ರಸ್ತೆಗೆ ಹರಿಯುತ್ತಿದೆ ಎಂಬ ಕಾರಣಕ್ಕೆ ಪಿಂಟೋ ಬೇಕರಿ ಸಮೀಪ ರಸ್ತೆ ಅಗೆಯಲಾಗಿತ್ತು.
ಬಳಿಕ ಪಕ್ಕದ ಮ್ಯಾನ್‌ಹೋಲ್‌ಗೆ ಪೈಪ್‌ಲೈನ್‌ ಸಂಪರ್ಕ ನೀಡಲಾಯಿತು. ಈವರೆಗೆ ಈ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಿಲ್ಲ.

Advertisement

 ಪರಿಹಾರ
ಕಳೆದ ಮಳೆಗಾಲದಲ್ಲಿ ಚರಂಡಿಯಲ್ಲಿ ನೀರು ಹರಿಯದೆ ಸುತ್ತಮುತ್ತಲಿನ ಮನೆಗಳಿಗೆ ನುಗ್ಗಿತ್ತು. ಅದೇ ಕಾರಣಕ್ಕೆ ಚರಂಡಿ ಕಾಮಗಾರಿ ಶನಿವಾರ ಆರಂಭಗೊಂಡಿದ್ದು, ಎರಡು ವಾರದಲ್ಲಿ ಪೂರ್ಣಗೊಳ್ಳಲಿದೆ. ಕಳೆದ ಬಾರಿ ಮಾಡಿದ್ದ ಕಾಮಗಾರಿ ಸಮರ್ಪಕವಾಗಿಲ್ಲ. ಇದೇ ಕಾರಣಕ್ಕೆ ಆ ಗುತ್ತಿಗೆದಾರರಿಗೆ ಹಣ ಪಾವತಿ ಮಾಡಿಲ್ಲ. ಈ ಬಾರಿ ಖಂಡಿತವಾಗಿಯೂ ಸಮಸ್ಯೆಗೆ ಪರಿಹಾರ ಸಿಗುತ್ತದೆ.
 -ಯಶವಂತ್‌, ಸ್ಥಳೀಯ ಕಾರ್ಪೊರೇಟರ್‌.

 ದೂರಿನ ಹಿನ್ನೆಲೆ
ಕೊಡಿಯಾಲ್‌ಗ‌ುತ್ತು ಕ್ರಾಸ್‌ ಬಳಿ ನೀರು ಹರಿಯುವ ತೋಡಿಗೆ ಚರಂಡಿ ಸಂಪರ್ಕ ಕಲ್ಪಿಸಲಾಗುತ್ತಿದೆ. ವಿವಿಧ ಕಡೆಗಳಿಂದ ಹರಿದು ಬಂದ ಮಳೆ ನೀರು ಚರಂಡಿ ಸೇರದೆ ಕೃತಕ ನೆರೆ ಬರುತ್ತಿತ್ತು. ಮನೆ ಮಂದಿ ಈ ಬಗ್ಗೆ ದೂರು ನೀಡಿದ್ದು, ಕಾಮಗಾರಿ ಆರಂಭಿಸಲಾಗಿದೆ. ಈ ಹಿಂದೆ ನಡೆದ ಕಾಮಗಾರಿ ಬಗ್ಗೆ ಇಂಜಿನಿಯರ್‌ ಅವರೇ ಉತ್ತರಿಸಬೇಕು.
 -ಸುಧೀರ್‌ ಶೆಟ್ಟಿ ಕಣ್ಣೂರು ಸ್ಥಳೀಯ ಕಾರ್ಪೊರೇಟರ್‌.

Advertisement

Udayavani is now on Telegram. Click here to join our channel and stay updated with the latest news.

Next