Advertisement

RSS ಪುತ್ತೂರು ಜಿಲ್ಲಾ ಸಂಘ ಚಾಲಕ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ನಿಧನ

04:59 PM May 22, 2023 | Team Udayavani |

ಬಂಟ್ವಾಳ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪುತ್ತೂರು ಜಿಲ್ಲಾ ಸಂಘ ಚಾಲಕ, ಸಾಮಾಜಿಕ, ಧಾರ್ಮಿಕ,ಸಹಕಾರಿ ನೇತಾರ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ( 61)ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ.

Advertisement

ಸದಾ ನಗುಮುಖ ಗಂಭೀರ ವ್ಯಕ್ತಿತ್ವ,ನೇರ ನಡೆ ನುಡಿಯವರಾಗಿದ್ದ ಕಾಂತಪ್ಪ ಶೆಟ್ಟಿಯವರು ಹೃದಯ ವೈಶಾಲ್ಯತೆಯುಳ್ಳವರಾಗಿದ್ದರು. ಕೆಲ ಸಮಯಗಳಿಂದ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು,ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೋಮವಾರ ಮಧ್ಯಾಹ್ನ ಅವರು ಕೊನೆಯುಸಿರೆಳೆದಿದ್ದಾರೆ.

ರಾ.ಸ್ವ.ಸೇ.ಸಂಘದಲ್ಲಿ ಮಾತ್ರವಲ್ಲ ಭಾರತೀಯ ಜನತಾಪಕ್ಷದಲ್ಲು ಗುರುತಿಸಿಕೊಂಡಿದ್ದ ಅವರು ಒಂದುಬಾರಿ ಪುದು ಜಿ.ಪಂ.ಚುನಾವಣೆಗೆ ಸ್ಪರ್ಧಿ ಸೋಲನ್ನನುಭವಿಸಿದ ಬಳಿಕ  ರಾಜಕಾರಣದಿಂದ ದೂರ ಇದ್ದು,ರಾ.ಸ್ವ.ಸೇ.  ಸಂಘದ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಮೇರಮಜಲು ಗ್ರಾ.ಪಂ.ಅಧ್ಯಕ್ಷರಾಗಿ,ಫರಂಗೀಪೇಟೆ ವ್ಯ.ಸೇ.ಸ.ಸಂಘದ ಅಧ್ಯಕ್ಷರಾಗಿಯೂ ಸುದೀರ್ಘ ಅವಧಿಯ ಕಾಲ ಸೇವೆ ಸಲ್ಲಿಸಿದ್ದರು. ಕೊಡ್ಮಾಣ್ ಶ್ರೀಶಾರದ ಪೂಜಾ ಸೇವಾ ಸಮಿತಿಯ ಗೌರವಾಧ್ಯಕ್ಷರಾಗಿ,ಕೊಡ್ಮಾಣ್ ಪ್ರೌಢಶಾಲಾ ಎಸ್ ಡಿಎಂಸಿ ಸದಸ್ಯರಾಗಿಯು ಹಾಗೂ ವಿವಿಧ ಧಾರ್ಮಿಕ ಕೇಂದ್ರಗಳ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು.

ಈ ಹಿಂದೆ  ವಿಟ್ಲ ವಿಧಾನಸಭಾ ಕ್ಷೇತ್ರವಿದ್ದಾಗ ಬಿಜೆಪಿ ವಿಟ್ಮ ಕ್ಷೇತ್ರದ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಸ್ಥಳೀಯವಾಗಿ ಯುವಕರ ಸಾಮಾಜಿಕ ಚಟುವಟಿಕೆಗೆ ಮಾರ್ಗದರ್ಶಕರು, ಪ್ರೇರಣಾಶಕ್ತಿಯಾಗಿದ್ದರು. ವಾಗ್ಮೀಯು ಆದ ಕಾಂತಪ್ಪ ಶೆಟ್ಟಿ ಅವರು ಹವ್ಯಾಸಿ ನಾಟಕ ಕಲಾವಿದರಾಗಿದ್ದ ಕಾಂತಪ್ಪ ಶೆಟ್ಟಿ ಕೆಲ ನಾಟಕಗಳಲ್ಲಿಯ ಬಣ್ಣಹಚ್ಚಿದ್ದರು. ಸಂಘದಲ್ಲಿ ಕಾಂತಪ್ಪಣ್ಣ ಎಂದೇ ಚಿರಪರಿಚಿತರಾಗಿದ್ದರು. ಅವರು ಪತ್ನಿ ಹಾಗೂ ತಮ್ಮನ ಸಹಿತ ಬಂಧು ಬಳಗವನ್ನು ಅಗಲಿದ್ದಾರೆ.

Advertisement

ಇವರ ನಿಧನಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ,ಸಂಸದ ನಳಿನ್ ಕುಮಾರ್ ಕಟೀಲ್,ಆರ್ ಎಸ್ ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ ಸಹಿತ ಹಲವಾರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next