Advertisement

ಕಾಂಗ್ರೆಸ್‌  ಮುಕ್ತ ಕರ್ನಾಟಕ ಸಂದೇಶ ಕೊಡ್ತೇನೆ: ಪ್ರಸಾದ್‌

03:45 AM Mar 12, 2017 | Team Udayavani |

ಮೈಸೂರು: ನಂಜನಗೂಡು ಉಪ ಚುನಾವಣೆ ಗೆಲುವಿನ ಮೂಲಕ ಕಾಂಗ್ರೆಸ್‌ ಮುಕ್ತ ಕರ್ನಾಟಕದ ಸಂದೇಶ ಕೊಡುತ್ತೇನೆಂದು ಮಾಜಿ ಸಚಿವ ಶ್ರೀನಿವಾಸಪ್ರಸಾದ್‌ ಹೇಳಿದರು.ನಗರದಲ್ಲಿ ಶನಿವಾರ ನಗರ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಸ್ವಾಭಿಮಾನಿ ಸಮ್ಮಿಲನ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

Advertisement

ಕಾಂಗ್ರೆಸ್‌ನಲ್ಲಿದ್ದ ಶೇ.70ರಷ್ಟು ಜನರು ನನ್ನ ಜತೆ ಬಂದಾಯ್ತು. ಇನ್ನು ಸಿದ್ದರಾಮಯ್ಯ ಮತ್ತು ಮಹದೇವಪ್ಪ ಅವರ ಹತ್ತಿರವಿರುವುದು ಅಧಿಕಾರ ಮತ್ತು ಲೂಟಿ ಮಾಡಿದ ಹಣ ಮಾತ್ರ. ನಂಜನಗೂಡಿನ ಎರಡೂ ಬ್ಲಾಕ್‌ಗಳಿಗೆ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರನ್ನು ಮಾಡಲಾಗಿಲ್ಲ. ಜತೆಗೆ ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಯೇ ಇಲ್ಲದೆ ಹೊರಗಿನವರನ್ನು ಕರೆತರಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ಲೇವಡಿ ಮಾಡಿದರು.

ನಂಜನಗೂಡು ಉಪ ಚುನಾವಣೆ ನನ್ನ ಮತ್ತು ಸಿಎಂ ಸಿದ್ದರಾಮಯ್ಯ ನಡುವಿನ ಚುನಾವಣೆ. ನಾನು ಸೋತರೆ ರಾಜಕೀಯ ಸನ್ಯಾಸತ್ವ ತೆಗೆದುಕೊಳ್ಳುತ್ತೇನೆ. ಕಾಂಗ್ರೆಸ್‌ ಸೋತರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೀರಾ ಎಂದು ಸಿದ್ದರಾಮಯ್ಯಗೆ ಪಂಥಾಹ್ವಾನ ನೀಡಿದರು. 

ಶ್ರೀನಿವಾಸಪ್ರಸಾದ್‌ ಅವರು ಸಕ್ರಿಯ ರಾಜಕಾರಣದಲ್ಲಿರಬೇಕೆಂದು ಮುಖ್ಯಮಂತ್ರಿ ಪಲಾಯನವಾದ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next