Advertisement

ಉಗ್ರರ ಹಿಟ್ ಲಿಸ್ಟ್ ನಲ್ಲಿ ವಿರಾಟ್: ಟೀಂ ಇಂಡಿಯಾ ಆಟಗಾರರಿಗೆ ಹೆಚ್ಚಿದ ಭದ್ರತೆ

10:15 AM Oct 30, 2019 | Team Udayavani |

ಹೊಸದಿಲ್ಲಿ: ಮುಂದಿನ ರವಿವಾರದಂದು ದಿಲ್ಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಬಾಂಗ್ಲಾದೇಶ ವಿರುದ್ಧ ನಡೆಯಲಿರುವ ಮೊದಲ ಟಿ ಟ್ವೆಂಟಿ ಪಂದ್ಯಕ್ಕೂ ಮೊದಲು ನಾಯಕ ವಿರಾಟ್ ಕೊಹ್ಲಿ ಮತ್ತು ಭಾರತ ತಂಡಕ್ಕೆ ಹೆಚ್ಚಿನ ಭದ್ರತೆ ನೀಡಲಾಗಿದೆ.

Advertisement

ವಿರಾಟ್ ಕೊಹ್ಲಿ ಸೇರಿದಂತೆ ಹಲವು ಪ್ರತಿಷ್ಠಿತರನ್ನು ಹೆಸರಿಸಿ ದಾಳಿ ನಡೆಸುವ ಬಗ್ಗೆ ಅನಾಮಧೇಯ ಪತ್ರ ದೊರೆತ ಹಿನ್ನಲೆಯಲ್ಲಿ ಭಧ್ರತೆ ಹೆಚ್ಚಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಅಮಿತ್ ಶಾ, ಎಲ್.ಕೆ ಅಡ್ವಾಣಿ ಸೇರಿದಂತೆ ಹಲವರನ್ನು ಹೆಸರಿಸಿ ಬೆದರಿಕೆ ಪತ್ರವೊಂದು ದೊರೆತ ಹಿನ್ನಲೆ ಭದ್ರತೆ ಒದಗಿಸಲಾಗಿದೆ.

ಆದರೆ ಬಾಂಗ್ಲಾ ವಿರುದ್ಧದ ಟಿ ಟ್ವೆಂಟಿ ಪಂದ್ಯಕ್ಕೆ ವಿರಾಟ್ ಗೆ ವಿಶ್ರಾಂತಿ ನೀಡಲಾಗಿದ್ದು, ಅವರು ದಿಲ್ಲಿ ಪಂದ್ಯದಲ್ಲಿ ಕಣಕ್ಕಿಳಿಯುತ್ತಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next