Advertisement

ರಸ್ತೆ ಅಪಘಾತ: ಕೊಳಲಗಿರಿ ಮೂಲದ ಯುವಕ ಮೃತ್ಯು

11:26 AM Oct 23, 2021 | Team Udayavani |

ಮುಂಬೈ: ಇಲ್ಲಿನ ಚೆಂಬೂರ್‌ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಉಡುಪಿ ಕೊಳಲಗಿರಿ ಮೂಲದ ರೋಶನ್ ಡಿಸೋಜಾ (33) ಮೃತಪಟ್ಟಿದ್ದಾರೆ.

Advertisement

ರೋಶನ್, ಏಳು ವರ್ಷಗಳಿಂದ ಮುಂಬೈ‌ನ ಶಿಪ್ ಯಾರ್ಡ್‌ನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಇವರು ಕೆಲಸ ಮುಗಿಸಿ ಮನೆಗೆ ತನ್ನ ಬೈಕಿನಲ್ಲಿ ಬರುತ್ತಿದ್ದ ವೇಳೆ ಹಿಂಬದಿಯಿಂದ ಟ್ರಕ್ ಢಿಕ್ಕಿ ಹೊಡೆದಿದೆ. ಇದರ ಪರಿಣಾಮ ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಇವರ ಮೃತದೇಹವನ್ನು ಮುಂಬೈನಿಂದ ಊರಿಗೆ ತರಲಾಗುತ್ತಿದೆ. ಅ.23ರ ಸಂಜೆ 4 ಗಂಟೆಗೆ ಕೊಳಲಗಿರಿಯ ಸೇಕ್ರೆಡ್ ಹಾರ್ಟ್ ಚರ್ಚ್‌ನಲ್ಲಿ ಅಂತಿಮ ವಿಧಿವಿಧಾನಗಳು ನಡೆಯಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next