Advertisement

ಇನ್ನೂ ಆಗದ ಕೊಳಲಗಿರಿ ಪರಾರಿ –ಶೀಂಬ್ರ ಸೇತುವೆ ಸಂಪರ್ಕ ರಸ್ತೆ: ಸಂಚಾರಕ್ಕೆ ಸಂಕಷ್ಟ

11:27 PM Jun 21, 2019 | Sriram |

ಮಣಿಪಾಲ: ಕೊಳಲಗಿರಿ ಪರಾರಿ – ಶೀಂಬ್ರ ಸೇತುವೆ ನಿರ್ಮಾಣವಾಗಿ ಹಲವು ಸಮಯ ಕಳೆದರೂ ಸೇತುವೆಯ ಸಂಪರ್ಕ ರಸ್ತೆ ನಿರ್ಮಾಣವಾಗದೇ ಇರುವುದರಿಂದ ಇದರಲ್ಲಿ ಸಂಚರಿಸುವ ದ್ವಿಚಕ್ರ ವಾಹನ ಸವಾರರು ಸಂಚಾರಕ್ಕೆ ಸಂಕಷ್ಟವನ್ನು ಎದುರಿಸುವ ಪರಿಸ್ಥಿತಿ ಎದುರಾಗಿದೆ.ಸಂಚಾರ ಕಷ್ಟ ಸ್ವರ್ಣ ನದಿಗೆ ಅಡ್ಡವಾಗಿ ಈ ಸೇತುವೆ ನಿರ್ಮಾಣ ಮಾಡಬೇಕು ಎನ್ನುವ ಬೇಡಿಕೆ ಸಾರ್ವಜನಿಕ ವಲಯದಿಂದ ಹಲವು ವರ್ಷಗಳಿಂದ ಕೇಳಿ ಬಂದ ಹಿನ್ನಲೆಯಲ್ಲಿ ಲೋಕೋಪಯೋಗಿ ಇಲಾಖೆಯ ಮೂಲಕ ಈ ಸೇತುವೆ ಕಾಮಗಾರಿ ನಡೆಸಲಾಗಿತ್ತು. 2018ರಲ್ಲಿಯೇ ಕಾಮಗಾರಿ ಮುಗಿದಿತ್ತು. ಆದರೆ ಸೇತುವೆಗೆ ಹೊಂದಿಕೊಂಡ ಸಂಪರ್ಕ ರಸ್ತೆ ಮಾತ್ರ ಪೂರ್ಣಗೊಳ್ಳದ ಹಿನ್ನಲೆಯಲ್ಲಿ ಜನರಿಗೆ ಸಂಚರಿಸುವುದು ಕಷ್ಟ ಸಾಧ್ಯವಾಗಿದೆ.

Advertisement

ರಸ್ತೆ ಕೆಸರುಮಯ
ಕೊಳಲಗಿರಿ, ಉಪ್ಪೂರು, ಬ್ರಹ್ಮಾವರ ಮೊದಲಾದ ಭಾಗದ ಜನರು ಮಣಿಪಾಲ ಹಾಗೂ ಈ ಮಾರ್ಗದಲ್ಲಿ ಮುಂದೆ ತೆರಳಲು ಈ ಸೇತುವೆ ಬಹಳಷ್ಟು ಅನುಕೂಲಕರವಾಗಿದ್ದು ಸಂಪರ್ಕ ರಸ್ತೆ ಸಮಸ್ಯೆ ಮಾತ್ರ ಜನರನ್ನು ಕಾಡುತ್ತಿದೆ. ರಸ್ತೆಗೆ ಡಾಮರೀಕರಣವಾಗದೇ ಇರುವುದರಿಂದ ಸುರಿದ ಮಳೆಗೆ ಮಣ್ಣು ಕುಸಿದು ರಸ್ತೆ ಕೆಸರುಮಯವಾಗಿದೆ. ಈ ರಸ್ತೆಯಲ್ಲಿ ಪ್ರಯಾಣಿಸುವ ದ್ವಿಚಕ್ರ ವಾಹನ ಸವಾರರು ಸ್ಕಿಡ್‌ ಆಗಿ ಬೀಳುವ ಸ್ಥಿತಿ ಎದುರಾಗಿದೆ.

ಸಾರ್ವಜನಿಕರ ಒತ್ತಾಯ
ಸೇತುವೆ ನಿರ್ಮಾಣವಾಗಿ ವರ್ಷ ಕಳೆದರೂ ಸಂಪರ್ಕ ರಸ್ತೆ ಮಾತ್ರ ನಿರ್ಮಾಣವಾಗದೇ ಇರುವುದು ಈ ಭಾಗದಲ್ಲಿ ಸಂಚರಿಸಲು ಕಷ್ಟಕರವಾಗಿದೆ. ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಶೀಘ್ರವಾಗಿ ಸಂಪರ್ಕ ರಸ್ತೆ ನಿರ್ಮಾಣ ಮಾಡಬೇಕು ಎಂದು ಮನವಿ ಮೂಲಕ ಜನಪ್ರತಿನಿಧಿಗಳನ್ನು ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next