Advertisement

ಕೋಲಾರ:ಕೃಷಿ ಹೊಂಡಕ್ಕೆ ಬಿದ್ದು ರೈತ ದಂಪತಿ ದುರ್ಮರಣ 

10:54 AM Aug 26, 2017 | Team Udayavani |

ಕೋಲಾರ : ತಾಲೂಕಿನ ಹರಟಿ ಗ್ರಾಮದಲ್ಲಿ ರೈತ ದಂಪತಿ ಕೃಷಿ ಹೊಂಡಕ್ಕೆ ಬಿದ್ದು ದಾರುಣವಾಗಿ ಸಾವನ್ನಪ್ಪಿದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.

Advertisement

ಶ್ರೀರಾಮಪ್ಪ (50)ಮತ್ತು ಲಲಿತಮ್ಮ (45) ಎಂಬ ದಂಪತಿ ಮೃತ ದುರ್‌ದೈವಿ. ಎಂದಿನಂತೆ  ಹೊಲದಲ್ಲಿ ಕೆಲಸಕ್ಕಾಗಿ ತೆರಳಿದ್ದ ವೇಳೆ ಲಲಿತಮ್ಮ  ಕೃಷಿ ಹೊಂಡಕ್ಕೆ ಬಿದ್ದಿದ್ದಾರೆ. ಅವರನ್ನು ರಕ್ಷಿಸಲೆಂದು ರಾಮಪ್ಪ ತೆರಳಿದ್ದು ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. 

ಕೋಲಾರ ಗ್ರಾಮಾಂತರ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next