Advertisement

ಕ್ಷುಲ್ಲಕ ಕಾರಣಕ್ಕೆ ಗ್ರಾಮದ ಮಧ್ಯದಲ್ಲಿ ಯುವಕ ಕೊಲೆ! ಬೆಚ್ಚಿಬಿದ್ದ ಗ್ರಾಮಸ್ಥರು

12:55 PM Sep 20, 2020 | keerthan |

ಮಂಡ್ಯ: ಗ್ರಾಮದ ಮಧ್ಯೆಯಲ್ಲಿಯೇ ಯುವಕನೊಬ್ಬನನ್ನು ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಹೊಡಾಘಟ್ಟ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.

Advertisement

ಗ್ರಾಮದ ಮಂಜಣ್ಣ ಎಂಬುವರ ಮಗ ಅಭಿಷೇಕ್ (25) ಕೊಲೆಯಾದ ಯುವಕ.

ಶನಿವಾರ ರಾತ್ರಿ ಗ್ರಾಮದ ಮಧ್ಯದಲ್ಲಿಯೇ ಕ್ಷುಲ್ಲಕ ವಿಚಾರಕ್ಕೆ ಕೊಲೆ ನಡೆಯಲಾಗಿದೆ. ಯುವಕನಿಗೆ ಮಾರಾಕಾಸ್ತ್ರಗಳಿಂದ ಹೊಡೆಯಲಾಗಿದ್ದು, ಇದರಿಂದ ತೀವ್ರ ರಕ್ತಸ್ರಾವದಿಂದ ಯುವಕ ಮೃತಪಟ್ಟಿದ್ದಾನೆ.

ಯುವಕ ಅಭಿಷೇಕ್ ಕೊಲೆಯಾದ ಬಗ್ಗೆ ಭಾನುವಾರ ಬೆಳಗ್ಗೆ ಊರಿನವರಿಗೆ ತಿಳಿದು ಬಂದಿದ್ದು, ಸ್ಥಳಕ್ಕೆ ಕರೆಗೋಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಗೂಢಚರ್ಯೆ ಆರೋಪ: ಸೇನಾ ಮಾಹಿತಿ ರವಾನಿಸುತ್ತಿದ್ದ ದಿಲ್ಲಿಯ ಪತ್ರಕರ್ತ ರಾಜೀವ್‌ ಶರ್ಮಾ ಸೆರೆ

Advertisement

ಗ್ರಾಮದ ಮಧ್ಯೆಯೆ ಯುವಕನ ಕೊಲೆ ನಡೆದ ಪ್ರಕರಣದಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next