Advertisement

ಹಳೇ ಹುಬ್ಬಳ್ಳಿಯ ಬೈಪಾಸ್ ಬಳಿ ಯುವಕನ ಕೊಲೆ: ಹಣಕಾಸು ವೈಷಮ್ಯ ಶಂಕೆ

11:13 AM Dec 04, 2020 | keerthan |

ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ಬೈಪಾಸ್ ಬಳಿ ಯುವಕನೊಬ್ಬನನ್ನು, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಹತ್ಯೆಗೈದ ಘಟನೆ ಗುರುವಾರ ರಾತ್ರಿ ನಡೆದಿದೆ. ರೌಡಿಶೀಟರ್ ಸಲೀಂ ತಂಡದಿಂದ ಈ ಕೃತ್ಯ ನಡೆದಿದೆ ಎಂಬ ಅನುಮಾನಗಳು ವ್ಯಕ್ತವಾಗಿದೆ.

Advertisement

ಗುರುವಾರ ತಡರಾತ್ರಿ ಘಟನೆ ಸಂಭವಿಸಿದ್ದು, ಇಲ್ಲಿನ ಎಸ್.ಎಂ.ಕೃಷ್ಣ ನಗರದ ಶಾರುಖ್ ಸೌದಾಗರ (25) ಕೊಲೆಯಾದ ಯುವಕ.

ಇದನ್ನೂ ಓದಿ:ಶಿವಮೊಗ್ಗದಲ್ಲಿ ಮುಸಲ್ಮಾನ್ ಗೂಂಡಾಗಿರಿ ನಡೆಯಲ್ಲ: ಈಶ್ವರಪ್ಪ ಕೆಂಡಾಮಂಡಲ

ಹಣಕಾಸಿನ ವಿಷಯವಾಗಿ ರೌಡಿಶೀಟರ್ ಸಲೀಂ ಬಳ್ಳಾರಿ ತಂಡದವರು ಕೊಲೆ ಮಾಡಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಕಸಬಾಪೇಟೆ ಪೊಲೀಸರು ಹಂತಕರ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next