Advertisement

Kolkata;ಆಸ್ಪತ್ರೆಯಲ್ಲಿ ದಾಂಧಲೆ ಪ್ರಕರಣ: ಮೂವರು ಉನ್ನತ ಪೊಲೀಸ್ ಅಧಿಕಾರಿಗಳು ಸಸ್ಪೆಂಡ್

12:30 PM Aug 21, 2024 | Team Udayavani |

ಕೋಲ್ಕತಾ : ಟ್ರೈನಿ ವೈದ್ಯೆಯ ಅ*ತ್ಯಾಚಾರ ಮತ್ತು ಹ*ತ್ಯೆಯ ಬಳಿಕ ನಡೆದ ಪ್ರತಿಭಟನೆ ವೇಳೆ ಆರ್.ಜಿ.ಕರ್ ಆಸ್ಪತ್ರೆಯಲ್ಲಿ ನಡೆದ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಉನ್ನತ ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ.

Advertisement

ಅಮಾನತುಗೊಂಡಿರುವ ಪೊಲೀಸರಲ್ಲಿ ಇಬ್ಬರು ಸಹಾಯಕ ಪೊಲೀಸ್ ಆಯುಕ್ತರು(assistant police commissioners)ಮತ್ತು ಒಬ್ಬರು ಇನ್ಸ್‌ಪೆಕ್ಟರ್ ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಗಸ್ಟ್ 9 ರಂದು ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ತೀವ್ರ ಗಾಯದ ಗುರುತುಗಳೊಂದಿಗೆ ಟ್ರೈನಿ ವೈದ್ಯೆಯ ಶ*ವ ಪತ್ತೆಯಾಗಿತ್ತು.ಆಗಸ್ಟ್ 15 ರಂದು ಬೆಳಗ್ಗೆ ಪ್ರತಿಭಟನಾ ನಿರತರ ಗುಂಪು ಆಸ್ಪತ್ರೆ ಪ್ರವೇಶಿಸಿ ತುರ್ತು ವಿಭಾಗ, ನರ್ಸಿಂಗ್ ಸ್ಟೇಷನ್ ಮತ್ತು ಔಷಧಾಲಯವನ್ನು ಧ್ವಂಸಗೊಳಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next